ಬ್ರೇಕಿಂಗ್ ನ್ಯೂಸ್
24-05-24 09:14 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ.24: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಆರೋಪಿಯ ಬಾಯಿಬಿಡಿಸಿದ್ದು ಕೊಲೆ ಹಿನ್ನೆಲೆ ಬಗ್ಗೆ ತಿಳಿದುಕೊಂಡಿದ್ದಾರೆ.
ಆರೋಪಿ ಗಿರೀಶ್ ಕೇವಲ ಒಂದು ಸಾವಿರ ರೂಪಾಯಿಗಾಗಿ ಕೊಲೆ ಮಾಡಿದ್ದಾಗಿ ಅಧಿಕಾರಿಗಳ ಮುಂದೆ ಹೇಳಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅಂಜಲಿ ಮತ್ತು ಗಿರೀಶ್ ಹಲವಾರು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಗಿರೀಶ್ ಮೈಸೂರಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಪರಸ್ಪರ ಸಂಪರ್ಕದಲ್ಲಿದ್ದರು. ಮೇ 17ರಂದು ರಾತ್ರಿ ಅಂಜಲಿ, ಫೋನ್ ಮಾಡಿ ಒಂದು ಸಾವಿರ ರೂಪಾಯಿ ಪೊನ್ ಪೇ ಮಾಡಿಸಿಕೊಂಡಿದ್ದಳು. ಹಣವನ್ನು ಪೊನ್ ಪೇ ಮಾಡಿಸಿಕೊಂಡು ಗಿರೀಶ್ ನಂಬರ್ ಬ್ಲಾಕ್ ಮಾಡಿದ್ದಳು ಎಂಬ ಮಾಹಿತಿ ತನಿಖೆಯಲ್ಲಿ ಸಿಕ್ಕಿದೆ. ಇದರಿಂದ ಸಿಟ್ಟಿಗೆದ್ದ ಗಿರೀಶ್ ಮೈಸೂರಿನಿಂದ ಹುಬ್ಬಳ್ಳಿಗೆ ಬಂದಿದ್ದು ಪ್ರೀತಿಸುತ್ತಿದ್ದಾಕೆಯ ಮೇಲಿನ ದ್ವೇಷದಿಂದ ಕೊಲೆಗೆ ಸ್ಕೆಚ್ ಹಾಕಿದ್ದ. ರಾತ್ರೋರಾತ್ರಿ ಮೈಸೂರಿನಿಂದ ಹುಬ್ಬಳ್ಳಿಗೆ ಬಂದು ನಸುಕಿನ ಜಾವ ಮನೆಗೆ ನುಗ್ಗಿ ಅಂಜಲಿಯನ್ನು ಕೊಲೆ ಮಾಡಿದ್ದ.
ಸಿಐಡಿ ಅಧಿಕಾರಿಗಳ ಮುಂದೆ ಈ ವಿಚಾರವನ್ನು ಗಿರೀಶ್ ಹೇಳಿಕೊಂಡಿದ್ದು ಕೇವಲ ಒಂದು ಸಾವಿರ ರೂಪಾಯಿಗಾಗಿ ಅಂಜಲಿ ಜೀವ ತೆಗೆದ್ನಾ ಎನ್ನುವ ಸಂಶಯ ಮೂಡಿದೆ. ಯಾವ ಕಾರಣಕ್ಕೆ ಹಣ ಹಾಕಿಸಿಕೊಂಡಿದ್ದಳು, ಅವರ ನಡುವಿನ ವ್ಯವಹಾರ ಏನಿತ್ತು, ಮನಸ್ತಾಪ ಕಾರಣಕ್ಕೆ ಫೋನ್ ಬ್ಲಾಕ್ ಮಾಡಿದ್ದಳೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಂಜಲಿ ಕೊಲೆಯಾಗಿ ಹತ್ತು ದಿನ ಕಳೆದರೂ ಪೊಲೀಸರಿಗೆ ಇನ್ನೂ ಕೊಲೆಗೆ ಬಳಸಿದ್ದ ಚಾಕು ಪತ್ತೆಯಾಗಿಲ್ಲ. ಹತ್ಯೆಯಾದ ಸ್ಥಳದ ಬಳಿ ಸುತ್ತಮುತ್ತ ಇಂಚಿಂಚು ಹುಡುಕಾಡಿದರೂ ಚಾಕು ಸಿಗದೇ ಇರುವುದರಿಂದ ಪೊಲೀಸರಿಗೆ ತಲೆನೋವಾಗಿದೆ. ಸ್ಥಳೀಯ ಪೊಲೀಸರು ಸೇರಿದಂತೆ ಸಿಐಡಿ ಅಧಿಕಾರಿಗಳು ಕೊಲೆ ನಡೆದ ಸ್ಥಳದಿಂದ ಚರಂಡಿ ಸೇರಿ ರಸ್ತೆ ಆಸುಪಾಸಿನಲ್ಲಿ ಹುಡುಕಾಟ ಮಾಡಿದರೂ ಚಾಕು ಪತ್ತೆಯಾಗಿಲ್ಲ. ಚಾಕುವನ್ನು ಎಲ್ಲಿ ಎಸೆದಿದ್ದೇನೆ ಎಂಬ ಬಗ್ಗೆ ಆರೋಪಿ ಪೊಲೀಸರಿಗೆ ಸರಿಯಾದ ಮಾಹಿತಿ ನೀಡಿಲ್ಲ.
Hubballi Anjali murder case, Accused killed her over thousand rupees, shocking details revealed
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm