ಬ್ರೇಕಿಂಗ್ ನ್ಯೂಸ್
30-05-24 10:27 am Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ ತಿಂಗಳಿಗೆ 8500 ರೂ. ಸಿಗುತ್ತದೆ ಎಂಬ ವದಂತಿ ನಂಬಿದ ಸಾವಿರಾರು ಮಹಿಳೆಯರು ಖಾತೆ ಮಾಡಿಸಲು ಬೆಂಗಳೂರಿನಲ್ಲಿ ಅಂಚೆ ಕಚೇರಿಗೆ ದಾಂಗುಡಿ ಇಡುತ್ತಿದ್ದಾರೆ. ಬೆಂಗಳೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಬುರ್ಖಾ ಹಾಕಿದ ಮಹಿಳೆಯರು ಸರತಿ ಸಾಲಿನಲ್ಲಿ ನಿಂತಿದ್ದು ಅಂಚೆ ಕಚೇರಿ ಸಿಬಂದಿಗೆ ಸಮಸ್ಯೆ ಉಂಟು ಮಾಡಿದ್ದಾರೆ.
ಲೋಕಸಭೆ ಫಲಿತಾಂಶ ದಿನ ಹತ್ತಿರವಾಗುತ್ತಿದ್ದಂತೆ ಜನರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಂದಾಗಿದ್ದಾರೆ. ಪೋಸ್ಟ್ ಆಫೀಸ್ ಎದುರಿನಲ್ಲಿ ದಿನದಿಂದ ದಿನಕ್ಕೆ ಜನಜಂಗುಳಿ ಹೆಚ್ಚಾಗುತ್ತಿದ್ದು, ಕಚೇರಿ ಎದುರು ಜಮಾಯಿಸಿದ ಜನರನ್ನು ನಿಭಾಯಿಸುವುದು ಸಿಬ್ಬಂದಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಖಾತೆ ಮಾಡಿಸುವ ಸಲುವಾಗಿ ಹೆಂಗಳೆಯರು ಬೆಳಗ್ಗೆ 6 ಗಂಟೆಯಿಂದಲೇ ಅಂಚೆ ಕಚೇರಿ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಜನಸಂದಣಿಯನ್ನು ನಿಭಾಯಿಸಲು ಮಹಿಳಾ ಪೊಲೀಸರು ಮತ್ತು ಅಂಚೆ ಕಚೇರಿಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಾಯಿ ಮಾತು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ ಗಳನ್ನು ನಂಬಿ ಖಾತೆ ಮಾಡಿಸಲು ಬಂದಿರುವುದಾಗಿ ಮಹಿಳೆಯರು ಹೇಳಿದ್ದಾರೆ. ಸರ್ಕಾರ ಬಂದ ಕೂಡಲೇ ಹಣ ಬರುತ್ತದೆ ಎಂದು ಕ್ಯುನಲ್ಲಿ ನಿಂತವರು ಹೇಳುತ್ತಿದ್ದರು.
ಕೊನೆಗೆ, ಅಂಚೆ ಕಚೇರಿಯ ಹೊರಗಡೆ ಯಾವುದೇ ಹಣ ಪಾವತಿ ಮಾಡುವುದಿಲ್ಲ ಎಂದು ಬೋರ್ಡ್ ಹಾಕಿದರೂ, ಜನರು ಕೇಳಲಿಲ್ಲ. ನಾವು ಖಾತೆ ತೆರೆಯುತ್ತೇವೆ ಎಂದು ಪಟ್ಟು ಹಿಡಿದವರೂ ಇದ್ದರು. ದಿನದಲ್ಲಿ 500-600 ಮಂದಿ ಕ್ಯೂ ನಿಂತು ಖಾತೆ ತೆರೆಯುತ್ತಿದ್ದಾರೆ. ಕಾಂಗ್ರೆಸ್ ಶಾಸಕರು, ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ಕೂಡಲೇ ನಿಮ್ಮ ಖಾತೆಗೆ ಹಣ ಬರುತ್ತದೆ ಎಂದು ಹೇಳಿದ್ದನ್ನು ನಂಬಿ ಬಂದಿದ್ದಾಗಿ ಕೆಲವರು ಹೇಳಿದ್ದಾರೆ. ಶಿವಾಜಿನಗರ, ಚಾಮರಾಜಪೇಟೆ ಆಸುಪಾಸಿನಲ್ಲಿ ಅತಿ ಹೆಚ್ಚು ಮಹಿಳೆಯರು ಅಂಚೆ ಕಚೇರಿ ಮುಂದೆ ಇಡೀ ದಿನ ಕ್ಯೂ ನಿಂತಿದ್ದಾರೆ.
ರಾಜ್ಯದಲ್ಲಿ ಗೃಹಲಕ್ಷ್ಮಿ ಇದ್ದಂತೆ ಕೇಂದ್ರದಲ್ಲಿ ಅದೇ ಮಾದರಿಯ ಯೋಜನೆ ತರುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತ ಬಂದಿದ್ದಾರೆ. ಹೀಗಾಗಿ ಫಲಿತಾಂಶಕ್ಕೆ ನಾಲ್ಕು ದಿನ ಇರುವಾಗಲೇ ಮಹಿಳೆಯರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಂದಾಗಿದ್ದಾರೆ.
An otherwise silent General Post Office in the city is witnessing an unprecedented rush of women hurrying to open India Post Payment Bank accounts, anticipating a monthly deposit of Rs 8,500 into their accounts if the I.N.D.I.A. bloc comes to power at the Centre.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm