ಬ್ರೇಕಿಂಗ್ ನ್ಯೂಸ್
30-05-24 06:41 pm HK News Desk ಕರ್ನಾಟಕ
ಮೈಸೂರು, ಮೇ.30: ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗಲೇ ಮಹಿಳಾ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ 50 ಸಾವಿರ ರೂ. ಹಣ ಪಡೆಯುವಾಗ ಸಬ್ ಇನ್ಸ್ಪೆಕ್ಟರ್ ರಾಧಾ ಸಿಕ್ಕಿಬಿದ್ದಿದ್ದಾರೆ. ರಾಧಾ ಅವರನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿರುವುದಾಗಿ ಲೋಕಾಯುಕ್ತ ಅಧೀಕ್ಷಕರು ತಿಳಿಸಿದ್ದಾರೆ. ಮೈಸೂರಿನ ಕೆ ಆರ್ ಮೊಹಲ್ಲಾ ನಿವಾಸಿಯಾದ ಸಿವಿಲ್ ಕಾಂಟ್ರಾಕ್ಟರ್ ಮಹೇಶ್ ಎಂಬುವರು ಮೇ 13 ರಂದು ಮೈಸೂರು ಲೋಕಾಯುಕ್ತ ಠಾಣೆಗೆ ಹಾಜರಾಗಿ ನೀಡಿದ ದೂರಿನ ಆಧಾರದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
ಕುವೆಂಪು ನಗರದ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ತಮಗೆ ಸೇರಿದ ಚಿನ್ನಾಭರಣ, ಆಸ್ತಿ, ಬ್ಯಾಂಕ್ ಪಾಸ್ ಬುಕ್, ಲಾಕರ್ ಕೀ, ಕಾರ್ ಸೇರಿದಂತೆ ಇತರ ಸೊತ್ತನ್ನು ಕುವೆಂಪುನಗರದ ಮಹಿಳಾ ಸಬ್ ಇನ್ಸ್ಪೆಕ್ಟರ್ ರಾಧಾ ವಶಕ್ಕೆ ಪಡೆದುಕೊಂಡಿದ್ದರು. ಈ ವಸ್ತುಗಳನ್ನ ವಾಪಸ್ ಕೊಡಲು ಎರಡು ಲಕ್ಷ ಹಣ ನೀಡುವಂತೆ ಸಬ್ ಇನ್ಸ್ಪೆಕ್ಟರ್ ಬೇಡಿಕೆ ಇಟ್ಟಿದ್ದರು ಎಂದು ಸಿವಿಲ್ ಕಾಂಟ್ರಾಕ್ಟರ್ ಮಹೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಂದು ಕಾರ್ಯಾಚರಣೆ ಕೈಗೊಂಡಾಗ ಪೊಲೀಸ್ ಠಾಣೆಯಲ್ಲಿ ಮಹೇಶ್ ಅವರಿಂದ ಸಬ್ ಇನ್ಸ್ಪೆಕ್ಟರ್ ರಾಧಾ 50 ಸಾವಿರ ರೂ. ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಈ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ಮಹಾನಿರ್ದೇಶಕರಾದ ಪ್ರಶಾಂತ್ ಕುಮಾರ ಠಾಕೂರ್ ಮತ್ತು ಪೊಲೀಸ್ ಮಹಾನಿರೀಕ್ಷಕರಾದ ಸುಬ್ರಹ್ಮಣ್ಣೇಶ್ವರರಾವ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಅಧೀಕ್ಷಕರಾದ ಸಜೀತ್ ವಿ.ಜೆ ಅವರ ನೇತೃತ್ವದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಇಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
Mysuru police inspector Radha arrested by Lokayukta while accepting bribe of 1 lakh. Radha was a Sub Inspector of police working at Kuvempunagara.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm