ಬ್ರೇಕಿಂಗ್ ನ್ಯೂಸ್
04-06-24 04:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.04: ಈ ಬಾರಿ ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದ ಬೆಂಗಳೂರು ಗ್ರಾಮಾಂತರದಲ್ಲಿ 3 ಬಾರಿ ಸಂಸದರಾಗಿದ್ದ ಡಿಕೆ ಸುರೇಶ್ ವಿರುದ್ಧ ಸ್ಪರ್ಧೆಗಿಳಿದಿದ್ದ ಡಾ. ಮಂಜುನಾಥ್ ಗೆದ್ದು ಬೀಗಿದ್ದಾರೆ. ಬೆಂಗಳೂರು ಗ್ರಾಮಾಂತರದ ಜನ ಬದಲಾಣೆ ಬಯಸಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಲಕ್ಷಾಂತರ ಜನರ ಹೃದಯ ಗೆದ್ದ ಡಾ. ಮಂಜುನಾಥ್, ಡಿಕೆ ಸುರೇಶ್ ವಿರುದ್ಧ ಭಾರೀ ಅಂತರದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಗೆಲುವಿನ ನಿರೀಕ್ಷೆಯಲ್ಲಿದ್ದ ಡಿಕೆ ಸುರೇಶ್, ಫಲಿತಾಂಶ ಕಂಡು ಬೇಸರದಿಂದ ಡಿಕೆಶಿ ಮನೆಯಿಂದ ಹೊರನಡೆದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ಆದ್ರೆ ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ, ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬೇಸರದ ಮಾತುಗಳನ್ನು ಹಾಡಿದ್ರು.
ಡಾ. ಮಂಜುನಾಥ್ ಗೆಲುವು ಖಚಿತವಾಗ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಮತದಾರ ಪ್ರಭುಗಳು ಕೊಟ್ಟಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಅಭಿನಂದನೆ ಹೇಳುತ್ತೇನೆ. ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿಯವರಿಗೆ ಹಾಗೂ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸುತ್ತೇನೆ ಎಂದು ಎಲ್ಲರಿಗೂ ಧನ್ಯವಾದ ತಿಳಿಸಿದ್ರು.
ಸೋಲು ಗೆಲುವನ್ನು ಸಮಾನವಾಗಿ ಸ್ವಿಕರಿಸಬೇಕು. ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಶ ಇತ್ತು. ಆದ್ರೆ ಮತದಾರರ ತೀರ್ಮಾನ ಬೇರೆ ಆಗಿದೆ. ಕ್ಷೇತ್ರಕ್ಕೆ ಕಾಲಿಟ್ಟ ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರಿಗೆ ನಾನು ಸದಾ ಜೊತೆಯಾಗಿರುತ್ತೇನೆ ಎಂದು ಡಿಕೆ ಸುರೇಶ್ ಹೇಳಿದ್ರು.
DK Suresh looses election in Bangalore rural, says I have accepted defeat against Dr Manjunath.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm