ಬ್ರೇಕಿಂಗ್ ನ್ಯೂಸ್
04-12-20 06:12 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.4 : ಮರಾಠ ಅಭಿವೃದ್ಧಿ ನಿಗಮವನ್ನು ರಚಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿ.5ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಬೆಂಗಳೂರಿನಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಬೆಂಬಲಿಸಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ 15 ಸಾವಿರ ಪೊಲೀಸರನ್ನು ರಾಜಧಾನಿಯಲ್ಲಿ ನಿಯೋಜಿಸಲಾಗಿದೆ.
ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು. ಹೀಗಾಗಿ, 15 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದ ಪೊಲೀಸರು ಎಲ್ಲಾ ಕಡೆ ಗಸ್ತು ತಿರುಗಲಿದ್ದಾರೆ. 5 ಜನ ಹೆಚ್ಚುವರಿ ಕಮಿಷನರ್ ದರ್ಜೆಯ ಅಧಿಕಾರಿಗಳು, ಡಿಸಿಪಿಗಳು, ಎಸಿಪಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಲಿದೆ. ಇದುವರೆಗೂ ಬೆಂಗಳೂರಿನಲ್ಲಿ ಕರ್ನಾಟಕ ಬಂದ್ಗೆ ಯಾರೂ ನಮ್ಮ ಬಳಿ ಅನುಮತಿ ಕೇಳಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.


ಮುಂಜಾಗ್ರತಾ ಕ್ರಮವಾಗಿ 35 ಕೆಎಸ್ಆರ್ಪಿ, 32 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ನಾಳೆ ಯಾವುದೇ ರ್ಯಾಲಿಗೂ ಅವಕಾಶ ನೀಡುವುದಿಲ್ಲ. ಕರ್ನಾಟಕ ಬಂದ್ಗೆ ಬಿಎಂಟಿಸಿ, ಕೆಎಸ್ಆರ್ಟಿಸಿ ಬೆಂಬಲ ಸೂಚಿಸಿಲ್ಲ. ಹೀಗಾಗಿ, ಆ ಬಸ್ಗಳನ್ನು ತಡೆಯುವ ಹಾಗೆ ಇಲ್ಲ. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳು ಮಾಮೂಲಿನಂತೆ ಸಂಚರಿಸಲಿವೆ ಎಂದಿದ್ದಾರೆ.

ಇನ್ನು ಆಯಾ ವಿಭಾಗದ ಡಿಸಿಪಿಗಳಿಗೆ ಬಂದ್ನ ನಿರ್ವಹಣೆಯ ಹೊಣೆ ವಹಿಸಲಾಗಿದೆ. 300 ಪೊಲೀಸ್ ವ್ಯಾನ್ಗಳು ನಗರದಾದ್ಯಂತ ವಿಶೇಷ ಗಸ್ತು ನಡೆಸಲಿದೆ. ಯಾರೂ ಕೂಡ ಭಯ ಪಡುವ ಅಗತ್ಯ ಇಲ್ಲ. ಜನರು ಎಂದಿನಂತೆ ತಮ್ಮ ಚಟುವಟಿಕೆಗಳನ್ನು ಮಾಡಿಕೊಳ್ಳಬೇಕು. ಯಾರು ಕೂಡ ಪ್ರತಿಭಟನೆಗೆ ಹಾಗೂ ಮೆರವಣಿಗೆಗೆ ಅನುಮತಿ ಕೋರಿಲ್ಲ. ಅಹಿತಕರ ಘಟನೆ ನಡೆದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
Karnataka Bandh Over 15,000 police personnel will be deployed across the city to watch out for protests said Bangalore Commission, Kamal Pant.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm