ಬ್ರೇಕಿಂಗ್ ನ್ಯೂಸ್
05-06-24 05:48 pm HK News Desk ಕರ್ನಾಟಕ
ಬೀದರ್, ಜೂನ್ 5: ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸೋಲುಣಿಸಿ ಸಂಸತ್ಗೆ ಪ್ರವೇಶಿಸಿರುವ ಬೀದರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ಪುತ್ರ 26 ವರ್ಷದ ಸಾಗರ್ ಖಂಡ್ರೆ ದೇಶದ ಅತಿ ಕಿರಿಯ ಸಂಸದರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆಯವರ ಪುತ್ರ ಸಾಗರ್ 26 ವರ್ಷದ ಯುವಕನಾಗಿದ್ದು, ಬಿಬಿಎ- ಎಲ್ಎಲ್ಬಿ ಪದವೀಧರ. ರಾಜಕೀಯ ಕಣಕ್ಕಿಳಿದು ಮೊದಲ ಸ್ಪರ್ಧೆಯಲ್ಲೇ ಗೆಲುವಿನ ನಗೆ ಬೀರಿದ್ದಾರೆ. 2019ರ ಚುನಾವಣೆಯಲ್ಲಿ ಬೀದರಿನಲ್ಲಿ ತನ್ನ ತಂದೆಯನ್ನು ಸೋಲಿಸಿದ್ದ ಖೂಬಾ ವಿರುದ್ಧ ಕಳೆದ ಸಲಕ್ಕಿಂತ ಅಧಿಕ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಆಮೂಲಕ ತಂದೆಯ ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. 1,28,875 ಮತಗಳ ಅಂತರದಿಂದ ಗೆಲುವು ಕಂಡ ಸಾಗರ ಖಂಡ್ರೆ 6,66317 ಮತ ಪಡೆದಿದ್ದರು. ಎರಡು ಬಾರಿಯ ಬಿಜೆಪಿ ಸಂಸದ ಭಗವಂತ ಖೂಬಾ 5,37442 ಮತಗಳನ್ನು ಪಡೆದಿದ್ದರು.
2019ರ ಚುನಾವಣೆಯಲ್ಲಿ ಭಗವಂತ ಖೂಬಾ ಅವರು ಎದುರಾಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಈಶ್ವರ್ ಖಂಡ್ರೆ ಅವರನ್ನು 1,16834 ಮತಗಳಿಂದ ಸೋಲಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಭಗವಂತ ಖೂಬಾ ಅವರು ಮಾಜಿ ಮುಖ್ಯಮಂತ್ರಿ ಎನ್.ಧರ್ಮ ಸಿಂಗ್ ಅವರನ್ನು 92192 ಮತಗಳಿಂದ ಸೋಲಿಸಿದ್ದರು.
ರಾಜ್ಯ ಯುವ ಕಾಂಗ್ರೆಸ್ ಘಟಕದಲ್ಲಿ ಮುಂಚೂಣಿ ನಾಯಕರಾಗಿ, ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ ಸಾಗರ್, ತಮ್ಮ ತಂದೆ ಈಶ್ವರ್ ಖಂಡ್ರೆಯವರ ಗರಡಿಯಲ್ಲಿ ಹೆಜ್ಜೆಯಿಟ್ಟವರು. ಸಾಗರ್ ಅವರ ತಾತ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ಅವರು ಸಹ ಕಾಂಗ್ರೆಸ್ನಲ್ಲಿ ಸಚಿವರಾಗಿದ್ದರು.
Sagar Khandre, the 26-year-old Congress candidate fighting the elections for the first time, has won the Bidar seat by defeating the union minister Bhagwant Khuba by a margin of 1.29 lakh votes.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 05:56 pm
Mangalore Correspondent
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
06-09-25 05:26 pm
HK News Desk
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm