ಬ್ರೇಕಿಂಗ್ ನ್ಯೂಸ್
12-06-24 12:27 pm HK News Desk ಕರ್ನಾಟಕ
ಬೆಳಗಾವಿ, ಜೂನ್ 12: ಮಂಗಳೂರು ಮೂಲದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣ ಸೇರಿದಂತೆ ಹಲವಾರು ಕೇಸುಗಳನ್ನು ಎದುರಿಸುತ್ತಿರುವ ಜಯೇಶ್ ಪೂಜಾರಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದು ಇಂದು ಕೋರ್ಟಿಗೆ ಹಾಜರುಪಡಿಸಲು ಕರೆತಂದಿದ್ದಾಗ ಕೃತ್ಯ ನಡೆದಿದೆ. ಕೋರ್ಟ್ ಒಳ ಭಾಗದಲ್ಲೇ ವಕೀಲರು, ಸಾರ್ವಜನಿಕರು ಪೊಲೀಸರ ಸಮ್ಮುಖದಲ್ಲಿಯೇ ಥಳಿಸಿದ್ದಾರೆ. ಏಟು ಬೀಳುತ್ತಿದ್ದಂತೆ ಆರೋಪಿಯನ್ನು ರಕ್ಷಣೆ ಮಾಡಿ ಪೊಲೀಸರು ಹೊರಗಡೆ ಕರೆದುಕೊಂಡು ಹೋಗಿದ್ದಾರೆ.
ಕೈದಿಯನ್ನು ಬಳಿಕ ಪೊಲೀಸರು ಸ್ಥಳೀಯ ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋಗಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಜೈಲಿನಿಂದ ಜೀವ ಬೆದರಿಕೆ ಒಡ್ಡಿದ ಪ್ರಕರಣ ಸಂಬಂಧಿಸಿ ಪೊಲೀಸರು ಆತನನ್ನು ವಿಚಾರಣೆಗೆ ಕರೆತಂದಿದ್ದರು. ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಅಲೋಕ್ ಕುಮಾರ್ ಗೆ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರ ನಾಗಪುರದ ಕಚೇರಿಗೆ ಜೈಲಿನಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಲ್ಲದೆ, ಹತ್ತು ಕೋಟಿ ನೀಡುವಂತೆ ಜಯೇಶ್ ಪೂಜಾರಿ ಡಿಮ್ಯಾಂಡ್ ಇಟ್ಟಿದ್ದ. ಕೋರ್ಟ್ ನಲ್ಲಿ ಸಕಾಲಕ್ಕೆ ತನ್ನ ಕೇಸಿನ ಕುರಿತು ಅಹವಾಲು ಸ್ವೀಕರಿಸುತ್ತಿಲ್ಲ ಎಂಬ ಕೋಪದಲ್ಲಿ ಕೈದಿ ಪಾಕ್ ಪರ ಘೋಷಣೆ ಕೂಗಿ ವಿಕೃತಿ ಮೆರೆದಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿ ಜಯೇಶ್ ಪೂಜಾರಿ ಮೂಲತಃ ಮಂಗಳೂರಿನ ಪುತ್ತೂರಿನವನಾಗಿದ್ದು ಮುಂಬೈನಲ್ಲಿದ್ದು ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ. ಹಿಂದೆ ಅಂಡರ್ ವರ್ಲ್ಡ್ ಪಾತಕಿಗಳ ಜೊತೆಗೆ ಸಂಪರ್ಕದಲ್ಲಿದ್ದು ಉದ್ಯಮಿಗಳನ್ನು ಬೆದರಿಸಿ ಹಣ ಕೀಳುತ್ತಿದ್ದ. ನಾಲ್ಕು ವರ್ಷಗಳ ಹಿಂದೆ ಬಂಧನಕ್ಕೀಡಾಗಿ ಜೈಲಿನಲ್ಲಿದ್ದಾನೆ.
vCriminal #JayeshPoojari from puttur thrahsed in court hall at belagavi for #propakistan #slogans, video goes viral pic.twitter.com/wxf2dWGZJc
— Headline Karnataka (@hknewsonline) June 12, 2024
Criminal Jayesh Poojari from puttur thrahsed in court hall at belagavi for pro pakistan slogans, video goes viral. Jayesh Pujari was arrested for allegedly making threatening phone calls made to Union minister Nitin Gadkari this year, and Afsar Pasha, who is currently in jail in Karnataka after being convicted in a Bengaluru terror attack case.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm