ಬ್ರೇಕಿಂಗ್ ನ್ಯೂಸ್
12-06-24 01:14 pm HK News Desk ಕರ್ನಾಟಕ
ಮೈಸೂರು, ಜೂನ್ 12: ಯುವಕನ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ಮೈಸೂರಿನ ತೋಟದಲ್ಲಿ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ವಿಚಾರದಲ್ಲಿ ಅರಣ್ಯ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ದರ್ಶನ್ ವಿರುದ್ಧ ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಹಿಂದೆಯೇ ಎಫ್ ಐ ಆರ್ ದಾಖಲಿಸಿದ್ದು ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಐದು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೆ ದರ್ಶನ್ ನಿರ್ಲಕ್ಷ್ಯ ವಹಿಸಿದ್ದರು. ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ, ಪ್ರಾಪರ್ಟಿ ಮ್ಯಾನೇಜರ್ ವಿರುದ್ಧ ದೂರು ದಾಖಲಾಗಿತ್ತು.
ಈಗ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರುತ್ತಿದ್ದಂತೆ ಹಳೆ ಪ್ರಕರಣ ಮೈಗೆ ಬಿದ್ದುಕೊಂಡಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ದರ್ಶನ್ ತೋಟ ಹೊಂದಿದ್ದು ನಿಷೇಧಿತ ಪ್ರಭೇದದ ಬಾತುಕೋಳಿಗಳನ್ನು ಸಾಕಿದ್ದರು. ಪ್ರಕರಣ ದಾಖಲಾಗಿದ್ದರೂ ತನಿಖಾಧಿಕಾರಿ ವರ್ಗಾವಣೆಯಾದ ಬಳಿಕ ಯಾವುದೇ ಅಧಿಕಾರಿಗಳು ಗಮನ ಹರಿಸಿರಲಿಲ್ಲ. ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಬೇಕಿದ್ದರೂ ಅಧಿಕಾರಿಗಳೇ ನಿರ್ಲಕ್ಷ್ಯ ವಹಿಸಿದ್ದರು.
ನಿಯಮಗಳ ಪ್ರಕಾರ ಬಾರ್ ಹೆಡೆಡ್ ಗೂಸ್ ಸಾಕುವುದು ಕಾನೂನು ಬಾಹಿರವಾಗಿದೆ. ದರ್ಶನ್ ಸೆಲೆಬ್ರಿಟಿ ಆಗಿದ್ದರಿಂದ ಹಾಗೆಯೇ ಬಿಟ್ಟಿದ್ದರು. ದರ್ಶನ್ ತಲೆಮರೆಸಿಕೊಳ್ಳದ ಕಾರಣ ಬಲವಂತವಾಗಿ ಬಂಧಿಸಿಲ್ಲ ಎಂದು ಅಧಿಕಾರಿಗಳ ಸಬೂಬು ಹೇಳಿಕೊಂಡು ಬಂದಿದ್ದರು. ಈಗ ಬಾಡಿ ವಾರೆಂಟ್ ಪಡೆದು ವಿಚಾರಣೆಗೆ ಕರೆದೊಯ್ಯುವ ಅವಕಾಶ ಇದ್ದು ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಾರೋ ಅನ್ನುವ ಕುತೂಹಲ ಇದೆ.
Noted Kannada actor, who was arrested on Tuesday and sent to six days of police custody on murder charges, also faces a wildlife case. An FIR was filed against Darshan Thoogudeepa in January 2023 for housing four bar-headed goose in his farmhouse in T. Narasipura in Mysuru.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm