ಬ್ರೇಕಿಂಗ್ ನ್ಯೂಸ್
12-06-24 01:14 pm HK News Desk ಕರ್ನಾಟಕ
ಮೈಸೂರು, ಜೂನ್ 12: ಯುವಕನ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ಮೈಸೂರಿನ ತೋಟದಲ್ಲಿ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ವಿಚಾರದಲ್ಲಿ ಅರಣ್ಯ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ದರ್ಶನ್ ವಿರುದ್ಧ ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಹಿಂದೆಯೇ ಎಫ್ ಐ ಆರ್ ದಾಖಲಿಸಿದ್ದು ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಐದು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೆ ದರ್ಶನ್ ನಿರ್ಲಕ್ಷ್ಯ ವಹಿಸಿದ್ದರು. ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ, ಪ್ರಾಪರ್ಟಿ ಮ್ಯಾನೇಜರ್ ವಿರುದ್ಧ ದೂರು ದಾಖಲಾಗಿತ್ತು.
ಈಗ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರುತ್ತಿದ್ದಂತೆ ಹಳೆ ಪ್ರಕರಣ ಮೈಗೆ ಬಿದ್ದುಕೊಂಡಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ದರ್ಶನ್ ತೋಟ ಹೊಂದಿದ್ದು ನಿಷೇಧಿತ ಪ್ರಭೇದದ ಬಾತುಕೋಳಿಗಳನ್ನು ಸಾಕಿದ್ದರು. ಪ್ರಕರಣ ದಾಖಲಾಗಿದ್ದರೂ ತನಿಖಾಧಿಕಾರಿ ವರ್ಗಾವಣೆಯಾದ ಬಳಿಕ ಯಾವುದೇ ಅಧಿಕಾರಿಗಳು ಗಮನ ಹರಿಸಿರಲಿಲ್ಲ. ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಬೇಕಿದ್ದರೂ ಅಧಿಕಾರಿಗಳೇ ನಿರ್ಲಕ್ಷ್ಯ ವಹಿಸಿದ್ದರು.
ನಿಯಮಗಳ ಪ್ರಕಾರ ಬಾರ್ ಹೆಡೆಡ್ ಗೂಸ್ ಸಾಕುವುದು ಕಾನೂನು ಬಾಹಿರವಾಗಿದೆ. ದರ್ಶನ್ ಸೆಲೆಬ್ರಿಟಿ ಆಗಿದ್ದರಿಂದ ಹಾಗೆಯೇ ಬಿಟ್ಟಿದ್ದರು. ದರ್ಶನ್ ತಲೆಮರೆಸಿಕೊಳ್ಳದ ಕಾರಣ ಬಲವಂತವಾಗಿ ಬಂಧಿಸಿಲ್ಲ ಎಂದು ಅಧಿಕಾರಿಗಳ ಸಬೂಬು ಹೇಳಿಕೊಂಡು ಬಂದಿದ್ದರು. ಈಗ ಬಾಡಿ ವಾರೆಂಟ್ ಪಡೆದು ವಿಚಾರಣೆಗೆ ಕರೆದೊಯ್ಯುವ ಅವಕಾಶ ಇದ್ದು ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಾರೋ ಅನ್ನುವ ಕುತೂಹಲ ಇದೆ.
Noted Kannada actor, who was arrested on Tuesday and sent to six days of police custody on murder charges, also faces a wildlife case. An FIR was filed against Darshan Thoogudeepa in January 2023 for housing four bar-headed goose in his farmhouse in T. Narasipura in Mysuru.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm