ಬ್ರೇಕಿಂಗ್ ನ್ಯೂಸ್
13-06-24 04:57 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 13: ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪೊಲೀಸ್ ಠಾಣೆಯನ್ನ ಶಾಮಿಯಾನದಿಂದ ಮುಚ್ಚಿದ ಪ್ರಸಂಗ ನಡೆದಿದೆ.
ಹೌದು. ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಕೇಸ್ ನ ಕೊಲೆಗಡುಕರು ಇರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹೊದಿಸುವಂತೆ ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದ್ದಾರೆ. ಅಂತೇ. ಅದರಂತೆ ಠಾಣೆಯ ಸುತ್ತ ಸೈಡ್ ವಾಲ್ ಗಳನ್ನ ಕಟ್ಟಿ, ಆರೋಪಿಗಳು ಕಾಣದಂತೆ ಮಾಡಲಾಗಿದೆ. ಸದ್ಯ ಆಯುಕ್ತರು ಕೂಡ ಪೊಲೀಸ್ ಠಾಣೆಯಲ್ಲಿಯೇ ಇದ್ದಾರೆ. ಜೊತೆಗೆ ಠಾಣೆಯ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿನ್ನೆಯವರೆಗೆ ಅಭಿಮಾನಿಗಳು ಠಾಣೆಯ ಮುಂದೆ ಜಮಾಯಿಸಿದ್ದರು. ಈ ವೇಳೆ ಠಾಣೆ ಮುಂದೆ ಬ್ಯಾರಿಕೇಡ್ಗಳನ್ನು ಹಾಕಿದ್ದರು. ಆದರೆ ಇಂದು ಅಭಿಮಾನಿಗಳು ಕೂಡ ಠಾಣೆಯತ್ತ ಸುಳಿದಿಲ್ಲ. ಆದರೂ ಠಾಣೆಯ ಕಾಂಪೌಂಡ್ಗೆ ಶಾಮಿಯಾನ ಕಟ್ಟಿದ್ದು, ಭಾರೀ ಅನುಮಾನ ಹುಟ್ಟಿಸಿದೆ. ಮೊನ್ನೆ ಆರೋಪಿಗಳಿಗೆ ಠಾಣೆ ಒಳಗೆ ಬಿರಿಯಾನಿ ಕೊಟ್ಟಿದ್ದರು ಎಂದು ಹೇಳಲಾಗುತ್ತಿತ್ತು. ಈ ಬೆನ್ನಲ್ಲೇ ಇಂದು ಶಾಮಿಯಾನದಿಂದ ಮುಚ್ಚಿರುವುದು ಠಾಣೆ ಒಳಗಡೆ ಆರೋಪಿಗಳಿಗೆ ರಾಜಮರ್ಯಾದೆ ಕೊಡಲಾಗುತ್ತಿದೆಯಾ..? ಇವುಗಳನ್ನು ಮಾಧ್ಯಮಗಳಿಂದ ಮುಚ್ಚಿಡಲು ಈ ರೀತಿ ಮಾಡಲಾಗುತ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ.

ಸಾರ್ವಜನಿಕರಿಗೂ ಪ್ರವೇಶ ನಿರ್ಬಂಧಿಸಿ ಠಾಣೆ ಕ್ಲೋಸ್ ಮಾಡಲಾಗಿದೆ. ಇನ್ನೊಂದೆಡೆ ತುರ್ತು ವಿಚಾರಗಳಿಗೆ ಠಾಣೆಗೆ ಸಂಪರ್ಕ ಮಾಡಲು ಬಂದವರಿಗೂ ಪೊಲೀಸರು ಪ್ರತಿಕ್ರಿಯೆ ನೀಡುತ್ತಿಲ್ಲ. ಸಾರ್ವಜನಿಕ ಆಸ್ತಿಯಾಗಿರೋ ಪೊಲೀಸ್ ಠಾಣೆಗೆ ಸೈಡ್ ವಾಲ್ ಕಟ್ಟೋದೇನಿದೆ..!?, ಯಾರನ್ನ ಮೆಚ್ಚಿಸೋಕೆ ಪೊಲೀಸರು ಈ ಕೆಲಸ ಮಾಡುತ್ತಿದ್ದಾರೆ ಎಂಬ ಆಕ್ರೋಶದ ಪ್ರಶ್ನೆಗಳು ಎದ್ದಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಮರ್ಡರ್ ಪ್ರಕರಣ ಸಂಬಂಧ ಇದೀಗ ಪೊಲೀಸರು ಸ್ಯಾಂಡಲ್ವುಡ್ ಸ್ಟಾರ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸೋ ಕಾಲ್ಡ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 14 ಮಂದಿಯನ್ನ ಬಂಧಿಸಿದ್ದಾರೆ. ಸದ್ಯ ಆರೋಪಿಗಳೆಲ್ಲರೂ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿದ್ದು, ಇಂದು ಕೂಡ ಸ್ಥಳ ಮಹಜರು ಪ್ರಕ್ರಿಯೆ ನಡೆಯಲಿದೆ.
Prohibitory orders under Section 144 of CrPC have been imposed for five days around 200-metre radius of the Annapoorneshwari Nagar police station, where actor Darshan and his 12 associates, accused in the murder of Renukaswamy, have been housed.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm