ಬ್ರೇಕಿಂಗ್ ನ್ಯೂಸ್
13-06-24 08:39 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 13: ಕನ್ನಡ ಚಿತ್ರರಂಗದ ನಟ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಕೇಸ್ ಪ್ರಾರಂಭದಿಂದ ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರು ತನಿಖಾಧಿಕಾರಿ ಆಗಿದ್ದರು.
ಆದರೆ ಗಿರೀಶ್ ನಾಯ್ಕ್ ಅವರ ಬದಲಿಗೆ ಇಂದಿನಿಂದ ಎಸಿಪಿ ಚಂದನ್ ತನಿಖಾಧಿಕಾರಿಯಾಗಿ ನೇಮಕವಾಗಿದ್ದಾರೆ. ಇನ್ಮುಂದೆ ಎಸಿಪಿ ಚಂದನ್ ಅವರ ಸೂಚನೆಯಲ್ಲೇ ರೇಣುಕಾಸ್ವಾಮಿ ಕೊಲೆ ಕೇಸ್ ಮುಂದೆ ಸಾಗಲಿದೆ. ಗಿರೀಶ್ ಅವರ ಬದಲಿಗೆ ಚಂದನ್ ನೇಮಕದ ಮುಖ್ಯ ಕಾರಣವೆಂದರೆ, ಚುನಾವಣೆ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ರನ್ನ ಕಾಮಾಕ್ಷಿಪಾಳ್ಯ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈಗ ಚುನಾವಣೆ ಎಲ್ಲ ಮುಗಿದಿದ್ದರಿಂದ 2 ದಿನಗಳ ಹಿಂದೆಯೇ ಪುನಃ ತಮ್ಮ ಠಾಣೆಗೆ ಮರಳಬೇಕು ಎಂದು ಆದೇಶ ಬಂದಿತ್ತು. ಇದರಿಂದಾಗಿ ತನಿಖಾಧಿಕಾರಿಯನ್ನು ಚೇಂಜ್ ಮಾಡಲಾಗಿದೆ. ಮುಂದಿನ ತನಿಖೆಯ ದೃಷ್ಟಿಯಿಂದ ತನಿಖಾಧಿಕಾರಿಯನ್ನ ಬದಲಾವಣೆ ಮಾಡಲಾಗಿದೆ.
ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದ ಗಿರೀಶ್ ನಾಯ್ಕ್, ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಒಟ್ಟು 14 ಜನರನ್ನು ಬಂಧಿಸಿ ಕೇಸ್ಅನ್ನು ಸಮರ್ಥವಾಗಿ ನಡೆಸುತ್ತಿದ್ದರು. ಇದೀಗ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಠಾಣೆಗೆ ವಾಪಸ್ ಹಿನ್ನಲೆಯಲ್ಲಿ ವಿಜಯನಗರ ಉಪವಿಭಾಗ ಎಸಿಪಿ ಚಂದನ್ ನೂತನ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
Actor Darshan murder case, investigating officer Girish Naik who without any fear daringly arrested actor Darshan is now been transferred. ACP chandan is now appointed as new officer in this murder case.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm