ಬ್ರೇಕಿಂಗ್ ನ್ಯೂಸ್
14-06-24 07:13 pm HK News Desk ಕರ್ನಾಟಕ
ದಾವಣಗೆರೆ, ಜೂನ್.14: ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ವಿರುದ್ಧ ರಾಜಕೀಯ ಪ್ರೇರಿತ ಕೇಸ್ ದಾಖಲಿಸಲಾಗಿದೆ. ಆಕೆ ಮಾನಸಿಕ ಅಸ್ವಸ್ಥೆ, 53 ಜನರ ಮೇಲೆ ಕೇಸ್ ಹಾಕಿದ್ದಾಳೆ ಎಂದು ಗೃಹ ಸಚಿವರೇ ಹೇಳಿದ್ದರು. ಇದೀಗ ಧೀಡಿರ್ ಅಂತ ಕೇಸ್ ಗೆ ಮರುಜೀವ ಬಂದಿದ್ದು ಯಾಕೆ..? ಎಂದು ಪ್ರಶ್ನಿಸಿದ್ದಾರೆ.
ನನ್ನ ಸಹೋದರ ಸಂಬಂಧಿಗಳೇ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ, ನ್ಯಾಯ ಕೊಡಿಸಿ ಅಂತ ಯಡಿಯೂರಪ್ಪ ಮನೆಗೆ ಮಹಿಳೆ ಬಂದಿದ್ದಳು. 5 ಸಾವಿರ ಕೋಟಿ ಬಜಾಜ್ ಕಂಪನಿಯವರು ಕೊಡಬೇಕು, ಕೊಡಿಸಿ ಅಂತಾ ಗೋಗರೆದಿದ್ದಳು. ಅದು ಯಾವ ಅಕೌಂಟ್ ನಿಂದ ಬಂತು, ಯಾವ ಹಣ ಅನ್ನೋದು ತನಿಖೆ ಆಗಬೇಕು. ರಾಹುಲ್ ಗಾಂಧಿ, ಸುರ್ಜೇವಾಲಾ ಕೋರ್ಟ್ ಗೆ ಬಂದು ಹೋದ ಮೇಲೆ ಇದೆಲ್ಲ ಆಗ್ತಾ ಇದೆ.
ವಾಲ್ಮೀಕಿ ನಿಗಮದ ಭ್ರಷ್ಟಾಚಾರದಿಂದ ಶಿವಮೊಗ್ಗದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ್ರು. ಲೊಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 24 ಸ್ಥಾನ ಗೆಲ್ಲುವ ಭರವಸೆ ಇಟ್ಕೊಂಡಿದ್ರು, ಆದರೆ ಆಸೆ ಕೈಗೂಡಲಿಲ್ಲ. ಈ ರೀತಿ ಅಸಹಾಯಕರಾದ ಕೈ ಮುಖಂಡರು ದ್ವೇಷದ ರಾಜಕಾರಣ ಮಾಡ್ತಾ ಇದಾರೆ. ಬಾಲಕಿ ಸಹೋದರ, ತಾಯಿ ಮತ್ತು ಸಹೋದರಿ ಜೊತೆಗೆ ಇರಲಿಲ್ಲ. ಬಾಲಕಿ ಸಹೋದರನನ್ನು ಪ್ರಭಾವಿ ಸಚಿವರು ಕರೆಸಿ ಅವನಿಗೆ ಆಮಿಷ ತೋರಿಸಿ ಸತ್ತು ಹೋದ ಕೇಸಿಗೆ ಜೀವ ಕೊಟ್ಟಿದ್ದಾರೆ. ಸದ್ಯದಲ್ಲೇ ಅವರು ಯಾರು, ಏನು ಅಂತ ಹೆಸರು ಬಹಿರಂಗ ಪಡಿಸ್ತೀನಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಯಡಿಯೂರಪ್ಪ ಅವರು ಈಗಾಗಲೇ ಸಿಐಡಿ ಮುಂದೆ ತನಿಖೆಗೆ ಅಟೆಂಡ್ ಆಗ್ತೀನಿ ಅಂದಿದ್ದಾರೆ. ಈಗ ಸಾಕ್ಷ್ಯ ನಾಶ ಮಾಡ್ತಾರೆ ಬಂಧಿಸಬೇಕು ಅಂತಾರೆ, ಮಾಡೋದಿದ್ದರೆ 60 ದಿನಗಳ ಹಿಂದೆ ಸಾಕ್ಷ್ಯ ಮಾಡಬಹುದಿತ್ತಲ್ಲ. ಇದು ದುರುದ್ದೇಶದಿಂದ ದ್ವೇಷದ ರಾಜಕಾರಣ ಮಾಡ್ತಾ ಇದ್ದಾರೆ. ಯಡಿಯೂರಪ್ಪ ಬಂಧಿಸಿದ್ರೆ ಸರ್ಕಾರ ಪತನವಾಗುತ್ತೆ. ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಿದ್ದರಾಮಯ್ಯ ಅವರು ಮಹಿಳೆ ದೂರು ನೀಡಿದ್ದ ಉಳಿದ 52 ಜನರನ್ನ ಯಾಕೆ ಬಂಧಿಸಲಿಲ್ಲ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು. ಆಗ ಮಾತ್ರ ಬಾಲಕಿ ಹಿಂದೆ ಯಾರ್ಯಾರು ಇದ್ದಾರೆ ಅನ್ನೋದು ಗೊತ್ತಾಗುತ್ತೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
POCSO case against BSY, Influential minister behind conspiracy slams Renukacharya in Dawanagere.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm