ಬ್ರೇಕಿಂಗ್ ನ್ಯೂಸ್
22-06-24 03:27 pm Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾರಾಗಲು ನಟ ದರ್ಶನ್ ಹಣದ ಹೊಳೆ ಹರಿಸಿದ್ದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವೇಳೆ, 40 ಲಕ್ಷ ರೂ.ನಷ್ಟು ಹಣ ಸಾಲ ನೀಡಿದ್ದು ಬಿಜೆಪಿ ಶಾಸಕರೊಬ್ಬರ ಪರಮಾಪ್ತ ರಾಮ್ ಮೋಹನ್ ರಾಜ್ ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಇದರ ಬೆನ್ನಲ್ಲೇ ಹಣ ಕೊಟ್ಟಿದ್ದ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮೇಯರ್ ರಾಮ್ ಮೋಹನ್ರಾಜ್ ಅವರನ್ನು ವಿಚಾರಣೆ ನಡೆಸಲು ಮುಂದಾಗಿದ್ದಾರೆ.
ಕೊಲೆ ಪ್ರಕರಣದ ಆರೋಪಿ ದರ್ಶನ್ ವಿಚಾರಣೆ ವೇಳೆ, ಕೇಸ್ನಿಂದ ಬಚಾವಾಗಲು ಮೋಹನ್ ರಾಜ್ ಅವರಿಂದ 40 ಲಕ್ಷ ರೂ. ಸಾಲ ಪಡೆದು ಮನೆಯಲ್ಲಿಟ್ಟಿದ್ದೆ ಎಂದು ಹೇಳಿಕೆ ನೀಡಿದ್ದರು. ಈ ಹಣವನ್ನೂ ಈಗಾಗಲೇ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿ ದರ್ಶನ್ಗೆ ಹಣ ಕೊಟ್ಟಿದ್ದು ನಿಜವೇ? ಯಾವ ಉದ್ದೇಶಕ್ಕಾಗಿ ಸಾಲ ನೀಡಲಾಗಿತ್ತು. ಆರೋಪಿ ಕೃತ್ಯದ ಬಗ್ಗೆ ಏನಾದರೂ ಚರ್ಚೆ ನಡೆಸಿದ್ದರೇ ಎಂಬುದು ಸೇರಿದಂತೆ ಹಲವು ವಿಚಾರಗಳನ್ನು ತಿಳಿಯಲು ಪೊಲೀಸರು ಮೋಹನ್ ಅವರನ್ನು ವಿಚಾರಣೆ ನಡೆಸಲಿದ್ದಾರೆ. ಶುಕ್ರವಾರ ನೋಟಿಸ್ ಜಾರಿಗೊಳಿಸಿದ್ದರೂ ವಿಚಾರಣೆಗೆ ಬಂದಿರಲಿಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ.
ಆರೋಪಿ ನಟ ದರ್ಶನ್, ವಿನಯ್ ಸೇರಿದಂತೆ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ದರ್ಶನ್ ಬಳಿ ಜಪ್ತಿ ಮಾಡಲಾಗಿರುವ ಹಣದ ಮೂಲ ಹಾಗೂ ಕೃತ್ಯದ ಬಗ್ಗೆ ಹಲವರನ್ನು ಸಂಪರ್ಕಿಸಿದ್ದ ಕುರಿತೂ ಸರಣಿ ಪ್ರಶ್ನೆಗಳನ್ನು ಕೇಳಿ ಹೇಳಿಕೆ ದಾಖಲಿಸಿದ್ದಾರೆ. ಸಾಕ್ಷ್ಯ ನಾಶದ ಆರೋಪ ಹೊತ್ತಿರುವ ಪ್ರದೋಶ್, ಕರೆಂಟ್ ಶಾಕ್ ನೀಡಿರುವ ಧನರಾಜ್ನನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ. ಕೃತ್ಯದ ಸ್ಥಳಕ್ಕೆ ಭೇಟಿ ನೀಡಿದ್ದ ಇನ್ನೂ ಹಲವರ ಕುರಿತು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ. ನಾಲ್ವರು ಆರೋಪಿಗಳ ಕಸ್ಟಡಿ ಅವಧಿ ಶನಿವಾರ ಮುಕ್ತಾಯವಾಗಲಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ದರ್ಶನ್ ಸೇರಿ ನಾಲ್ವರು ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.
In a major development in the ongoing investigation of the Renukaswamy murder case, Kannada actor Darshan Thoogudeepa has admitted to borrowing ₹40 lakh from one of his friends to pay for the destruction of evidence.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm