ಬ್ರೇಕಿಂಗ್ ನ್ಯೂಸ್
23-06-24 07:38 pm HK News Desk ಕರ್ನಾಟಕ
ತುಮಕೂರು, ಜೂನ್ 23: ಪದವಿ ಓದುತ್ತಿದ್ದ 20 ವರ್ಷದ ವಿದ್ಯಾರ್ಥಿನಿ ಮತ್ತು 40 ವರ್ಷದ ವಿವಾಹಿತ ಪುರುಷ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಭಾನುವಾರ ಬೆಳಗ್ಗೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತಮ್ಮ ಪ್ರೀತಿಗೆ ಮನೆಯವರು ಒಪ್ಪಿಗೆ ನೀಡಿಲ್ಲವೆಂದು ಇಬ್ಬರೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಇವರಿಬ್ಬರ ಶವಗಳು ಪತ್ತೆಯಾಗಿವೆ. ಅನನ್ಯ (19) ಹಾಗೂ ರಂಗಶಾಮಣ್ಣ (40) ಮೃತರೆಂದು ತಿಳಿದುಬಂದಿದೆ. ಅನನ್ಯಾ ಕೊರಟಗೆರೆ ತಾಲೂಕಿನ ಲಕ್ಕಯ್ಯನಪಾಳ್ಯ ಗ್ರಾಮದವಳಾಗಿದ್ದು, ತುಮಕೂರಿನಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದಳು. ಪಕ್ಕದ ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ ವಿವಾಹಿತ ವ್ಯಕ್ತಿಯಾಗಿದ್ದು, ಈತನಿಗೆ ಮಡದಿ ಮತ್ತು ಮಕ್ಕಳಿದ್ದಾರೆ. ಆದರೆ, ಮಗಳ ವಯಸ್ಸಿನ ಯುವತಿಯನ್ನು ಪ್ರೀತಿಸಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


ಅಕ್ಕಪಕ್ಕದ ಗ್ರಾಮಸ್ಥರಾದ ಇಬ್ಬರೂ ನಾಪತ್ತೆಯಾಗಿ ಮೂರು ದಿನಗಳಾದರೂ ಪತ್ತೆ ಆಗಿರಲಿಲ್ಲ. ಮೊಬೈಲ್ ಟ್ರೇಸ್ ಮಾಡಿದಾಗ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಬಳಿ ಟ್ರೇಸ್ ಆಗಿತ್ತು. ಕೆರೆಯ ಬಳಿ ನಿಲ್ಲಿಸಿದ್ದ ರಂಗಶಾಮಣ್ಣನ ಕಾರಿನಲ್ಲಿ ಇಬ್ಬರ ಮೊಬೈಲ್ ಮತ್ತು ಕೆರೆಯ ದಂಡೆಯಲ್ಲಿ ಇಬ್ಬರ ಚಪ್ಪಲಿಗಳು ಪತ್ತೆಯಾಗಿದ್ದವು. ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಶಂಕೆಯನ್ನು ವ್ಯಕ್ತಪಡಿಸಿದ ಪೊಲೀಸರು ಅಗ್ನಿಶಾಮಕ ದಳದ ಸಹಾಯದಿಂದ ಶವ ಪತ್ತೆಗೆ ಮುಂದಾಗಿದ್ದರು.
ಶನಿವಾರ ತಡರಾತ್ರಿಯಾದ ಹಿನ್ನೆಲೆಯಲ್ಲಿ ಪತ್ತೆ ಕಾರ್ಯ ಸ್ಥಗಿತಗೊಳಿಸಿ ಭಾನುವಾರ ಬೆಳಗ್ಗೆಯಿಂದ ಕಾರ್ಯಾಚರಣೆ ಮುಂದುವರೆಸಿದ್ದರು. ಈ ವೇಳೆ ರಂಗಶಾಮಣ್ಣ ಹಾಗೂ ವಿದ್ಯಾರ್ಥಿನಿ ಅನನ್ಯಾ ಅವರ ಮೃತದೇಹಗಳು ಕೆರೆಯಲ್ಲಿ ಪತ್ತೆಯಾಗಿವೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರು ಪ್ರೇಮಿಗಳನ್ನು ಅವರ ಮನೆಯವರೇ ಕೊಲೆ ಮಾಡಿರಬಹುದೇ ಎಂಬ ಶಂಕೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದು, ಮರಣೋತ್ತರ ಪರೀಕ್ಷೆಯಿಂದ ಮಾಹಿತಿ ಲಭ್ಯವಾಗಲಿದೆ.
Tumkur suicide case, 20 year old college girl flees with 50 year old uncle, bodies of both found at lake. A 19-year-old college student and a married man are reported missing and it is suspected that they may have committed suicide by jumping into the Mavathur lake in Koratagere taluk. Their footwear were found by the edge of the water, giving rise to suspicion.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm