ಬ್ರೇಕಿಂಗ್ ನ್ಯೂಸ್
26-06-24 07:37 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 26: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಆರೋಪಿಗಳು 700ಕ್ಕೂ ಹೆಚ್ಚು ಖಾತೆಗಳಿಗೆ 94 ಕೋಟಿ ಹಣವನ್ನು ವರ್ಗಾವಣೆ ಮಾಡಿ, ಡ್ರಾ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ. ಹೈದರಾಬಾದ್ ನಲ್ಲಿ ಬಂಧಿತರಾಗಿರುವ ಸತ್ಯನಾರಾಯಣ ಶರ್ಮಾ ಮತ್ತು ಸಾಯಿತೇಜ್ ಅವರನ್ನು ತನಿಖೆ ನಡೆಸಿದಾಗ, ಹಣವನ್ನು ಬಳ್ಳಾರಿ, ಬೆಂಗಳೂರು ಭಾಗದ ನೂರಾರು ಮಂದಿಯ ಖಾತೆಗಳಿಗೆ ರವಾನಿಸಿರುವ ಮಾಹಿತಿ ನೀಡಿದ್ದಾರೆ.
ಹೈದರಾಬಾದಿನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋಪರೇಟಿವ್ ಎನ್ನುವ ಸಹಕಾರಿ ಸಂಸ್ಥೆಗೆ ವಾಲ್ಮೀಕಿ ನಿಗಮದ 94.73 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿತ್ತು. ಈ ಬಗ್ಗೆ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಹಕಾರಿ ಬ್ಯಾಂಕಿನಲ್ಲಿ ನಕಲಿ ಖಾತೆಗಳನ್ನು ಸಹಕರಿಸಿದ್ದ ಸತ್ಯನಾರಾಯಣ ಶರ್ಮಾ ಹಾಗೂ ದಾವಣಗೆರೆಯ ಚನ್ನಗಿರಿ ಮೂಲದ ಸಾಯಿತೇಜ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ಪ್ರಕರಣದಲ್ಲಿ ಈವರೆಗೆ 11 ಮಂದಿಯನ್ನು ಬಂಧಿಸಿದ್ದು, ಅವರಿಂದ 14 ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ. 94 ಕೋಟಿ ಪೈಕಿ 5 ಕೋಟಿಯನ್ನು ನಿಗಮದ ಬ್ಯಾಂಕ್ ಖಾತೆಗೆ ವಾಪಸ್ ಮಾಡಲಾಗಿತ್ತು. ಉಳಿದ 89 ಕೋಟಿ ಮೊತ್ತವನ್ನು 700ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿಯಿದೆ. ಆ ಖಾತೆಗಳಿಗೆ ಹಣ ರವಾನಿಸಿದ್ದು ಯಾರು, ಹಣವನ್ನು ಡ್ರಾ ಮಾಡಿ ಯಾರಿಗೆ ತಲುಪಿಸಲಾಗಿದೆ ಎನ್ನುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್, ಬಳ್ಳಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಮಿಕರು ಸೇರಿದಂತೆ ಹಲವಾರು ಮಂದಿಯ ಖಾತೆಗಳಿಗೆ 5 ಲಕ್ಷದಿಂದ 2 ಕೋಟಿ ವರೆಗೂ ಹಣ ವರ್ಗಾವಣೆ ಆಗಿದೆ. ಬ್ಯಾಂಕ್ ಖಾತೆ ತೆರೆಯುವುದು, ಡ್ರಾ ಮಾಡುವುದು, ಹಣವನ್ನು ಪೂರೈಕೆ ಮಾಡುವುದರ ಹಿಂದೆ ಶರ್ಮಾ ಮತ್ತು ಸಾಯಿತೇಜ್ ಕೈವಾಡ ಹೊಂದಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.
The SIT officers investigating the Valmiki Development Corporation scam found that the accused had transferred and withdrawn Rs 94 crore to more than 700 accounts.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm