ಬ್ರೇಕಿಂಗ್ ನ್ಯೂಸ್
30-06-24 09:56 pm HK News Desk ಕರ್ನಾಟಕ
ಹಾವೇರಿ, ಜೂನ್.30: ರಾಜ್ಯದಲ್ಲಿ ಈಡಿಗ ಸಮುದಾಯ ತನ್ನದೇ ಆದ ರಾಜಕೀಯ ಪ್ರಾಬಲ್ಯ ಹೊಂದಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುವುದಾದರೆ ಹಿಂದುಳಿದ ವರ್ಗದ ಬಿ.ಕೆ. ಹರಿಪ್ರಸಾದ್ ಅವರನ್ನೇ ಸಿಎಂ ಅಥವಾ ಡಿಸಿಎಂ ಮಾಡುವಂತೆ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.
ಯಾದಗಿರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮೀಜಿ, ಹರಿಪ್ರಸಾದ ಅವರ ಹಿಂದೆ ಇಡೀ ಹಿಂದುಳಿದ ವರ್ಗದ ಸಮಾಜ ಇದೆ. ಹರಿಪ್ರಸಾದ್ ಅವರ ಪರವಾಗಿ ಗಟ್ಟಿ ಧ್ವನಿಯಲ್ಲಿ ಹೇಳುತ್ತಿದ್ದೇನೆ. ಸಿಎಂ, ಡಿಸಿಎಂ ಸ್ಥಾನ ಬದಲಾದರೆ ಬಿಕೆ ಹರಿಪ್ರಸಾದ್ ಅವರಿಗೆ ಆ ಸ್ಥಾನ ನೀಡಬೇಕು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಾದ್ರೂ ಹರಿಪ್ರಸಾದ್ ಅವರಿಗೆ ನೀಡಬೇಕು. ಈ ಹುದ್ದೆಗಳನ್ನು ತುಂಬಲು ಹರಿಪ್ರಸಾದ್ ಸಮರ್ಥರಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ 49 ವರ್ಷಗಳ ಕಾಲ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದಿದ್ದಾರೆ. ಇಂದಿರಾ ಗಾಂಧಿಯಿಂದ ಹಿಡಿದು ಪ್ರಸ್ತುತ ಪ್ರಿಯಾಂಕಾ ಗಾಂಧಿ ವರೆಗೆ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಈಡಿಗ ಸಮಾಜಕ್ಕೆ ಒಂದೇ ಒಂದು ಸಚಿವ ಸ್ಥಾನ ನೀಡಿದ್ದಾರೆ. ಆದರೆ, ಬಿಜೆಪಿ ಸರ್ಕಾರವಿದ್ದಾಗ ಇಬ್ಬರಿಗೆ ಸಚಿವ ಸ್ಥಾನ, ಮೂವರಿಗೆ ನಿಗಮ ಮಂಡಳಿ ಸ್ಥಾನ ನೀಡಿದ್ದರು ಎಂದರು.
ಕಾಂಗ್ರೆಸ್ ಹೈಕಮಾಂಡ್ ಅಧಿಕಾರ ನೀಡುವಾಗ ಏನು ಹೊಂದಾಣಿಕೆ ಮಾಡಿಕೊಂಡಿತ್ತೋ ಅದರಂತೆ ಬದಲಾವಣೆ ಮಾಡುವುದಾದರೆ ಈಡಿಗ ಸಮಾಜದ ನಾಯಕ ಬಿ.ಕೆ.ಹರಿಪ್ರಸಾದ್ಗೆ ಸಿಎಂ ಸ್ಥಾನ ನೀಡಬೇಕು. ಕೊನೆ ಪಕ್ಷ ಡಿಸಿಎಂ ಹುದ್ದೆಯನ್ನಾದರೂ ನೀಡಲಿ. ರಾಜ್ಯ ಸರ್ಕಾರ ರಚನೆಯಾಗುವಾಗ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹರಿಪ್ರಸಾದ್ ಅವರನ್ನು ಸಚಿವರಾಗಿ ನೇಮಕ ಮಾಡುವಂತೆ ಹೇಳಿದ್ದರು. ಆದರೆ, ಅವರ ಮಾತನ್ನು ಗಾಳಿಗೆ ತೂರಿ ಸಚಿವ ಸ್ಥಾನವನ್ನೂ ನೀಡದೆ ಅಪಮಾನ ಮಾಡಲಾಗಿದೆ ಎಂದು ದೂರಿದರು.
The Yidiga community has its own political hegemony in the state. Pranavanandshree demanded to declare BK Hariprasad as CM or DCM if there is a change in the position of CM.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm