ಬ್ರೇಕಿಂಗ್ ನ್ಯೂಸ್
02-07-24 02:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.02: ನಟ ದರ್ಶನ್ ಮೇಲಿನ ಮಿತಿಮೀರಿದ ಅಭಿಮಾನದ ಹುಚ್ಚಿನಿಂದಾಗಿ ಅಭಿಮಾನಿಯೊಬ್ಬ ತಾನು ಹೆತ್ತ ಮಗುವನ್ನೇ ಕೈದಿ ಮಾಡಿ ಹಾಕಿದ್ದಾನೆ!
ಹೌದು, ಇದು ನಟನ ಮೇಲಿನ ಅಂಧಾಭಿಮಾನದ ಎಫೆಕ್ಟ್. ಮಗುವಿಗೆ ಪರಪ್ಪನ ಅಗ್ರಹಾರದ ಕೈದಿಯಂತೆ ಫೋಟೋ ಶೂಟ್ ಮಾಡಿಸಿದ್ದಾನೆ ಈ ಪುಣ್ಯಾತ್ಮ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ನ ಅಭಿಮಾನಿಗಳು ದಿನಕ್ಕೊಂದು ಅವತಾರ ತೋರುತ್ತಿದ್ದಾರೆ. ಇದೀಗ ಹೊಸದು. ಒಂದು ವರ್ಷದ ಮಗುವಿಗೆ ಜೈಲು ಕೈದಿಯ ರೀತಿ ಬಿಳಿ ಬಟ್ಟೆ ಹಾಕಿಸಿ ಈತ ಫೋಟೋ ಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಮಗುವಿಗೆ ದರ್ಶನ್ಗೆ ಕೊಡಲಾದ ಕೈದಿ ನಂಬರ್ ನೀಡಿದ್ದಾನೆ. ಕೈ ಕೋಳದ ಮಾದರಿ, ಕೈದಿಗಳ ರೀತಿ ಬಿಳಿ ಬಟ್ಟೆ ಹಾಕಿಸಿದ್ದಾನೆ.

ನಟನ ಮೇಲಿನ ಹುಚ್ಚು ಅಭಿಮಾನಕ್ಕೆ ಅಭಿಮಾನಿಗಳಿಂದ ನಿತ್ಯ ಒಂದೊಂದು ಹೊಸ ಟ್ರೆಂಡ್ ಸೃಷ್ಟಿಯಾಗುತ್ತಿದೆ. ದರ್ಶನ್ಗೆ ನೀಡಿರುವ ಕೈದಿ ನಂಬರ್ ಧರಿಸಿಕೊಂಡು ಒಬ್ಬಾತ ಫೋಟೋ ಶೂಟ್ ಮಾಡಿಸಿಕೊಂಡಿದ್ದ. ಇದೀಗ ಮಗುವಿಗೆ ಹೀಗೆ ಫೋಟೋ ಶೂಟ್ ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಾನಾ ಥರದ ಅಭಿಪ್ರಾಯಗಳು ವ್ಯಕ್ತವಾಗಿವೆ.
ʼಹಿಂದೆಲ್ಲ ಮಕ್ಕಳಿಗೆ ಕೃಷ್ಣನ ವೇಷ, ಸ್ವಾಮಿ ವಿವೇಕಾನಂದರ ವೇಷ, ಅಂಬೇಡ್ಕರ್ ಅವರಂತಹ ಗಣ್ಯ ವ್ಯಕ್ತಿಗಳ ರೀತಿಯ ಫೋಟೋ ಶೂಟ್ ಟ್ರೆಂಡ್ ಆಗಿತ್ತು. ಆದರೆ ಈಗ ಬೆಳೆಯುವ ಮಗುವಿಗೆ ಕೈದಿ ಫೋಟೋ ಶೂಟ್ ಮಾಡಿಸೋದೆ ಟ್ರೆಂಡ್ ಆಗಿದೆʼ ಎಂದು ಒಬ್ಬರು ಹೇಳಿದ್ದಾರೆ. “ಈಗಿಂದಾನೇ ಮಗನನ್ನು ಜೈಲಿಗೆ ಕಳಿಸೋ ಪ್ಲಾನ್ ಇದು. ನಟ ಒಳ್ಳೇದು ಮಾಡಿದಾಗ ಅಭಿಮಾನಿಗಳು ಸಂಭ್ರಮಿಸಿ ತಪ್ಪೇನೂ ಇಲ್ಲ. ಆದರೆ ಕೆಟ್ಟದು ಮಾಡಿದಾಗ ಖಂಡಿಸಿʼ ಎಂದು ಮತ್ತೊಬ್ಬರು ಬರೆದಿದ್ದಾರೆ.
Actor Darshan Fan makes baby wear prison costume, photos go viral with cell no 6106 on the dress. Comments on Internet has slammed darshan fan for such photo shoot.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm