ಬ್ರೇಕಿಂಗ್ ನ್ಯೂಸ್
02-07-24 02:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.02: ನಟ ದರ್ಶನ್ ಮೇಲಿನ ಮಿತಿಮೀರಿದ ಅಭಿಮಾನದ ಹುಚ್ಚಿನಿಂದಾಗಿ ಅಭಿಮಾನಿಯೊಬ್ಬ ತಾನು ಹೆತ್ತ ಮಗುವನ್ನೇ ಕೈದಿ ಮಾಡಿ ಹಾಕಿದ್ದಾನೆ!
ಹೌದು, ಇದು ನಟನ ಮೇಲಿನ ಅಂಧಾಭಿಮಾನದ ಎಫೆಕ್ಟ್. ಮಗುವಿಗೆ ಪರಪ್ಪನ ಅಗ್ರಹಾರದ ಕೈದಿಯಂತೆ ಫೋಟೋ ಶೂಟ್ ಮಾಡಿಸಿದ್ದಾನೆ ಈ ಪುಣ್ಯಾತ್ಮ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ನ ಅಭಿಮಾನಿಗಳು ದಿನಕ್ಕೊಂದು ಅವತಾರ ತೋರುತ್ತಿದ್ದಾರೆ. ಇದೀಗ ಹೊಸದು. ಒಂದು ವರ್ಷದ ಮಗುವಿಗೆ ಜೈಲು ಕೈದಿಯ ರೀತಿ ಬಿಳಿ ಬಟ್ಟೆ ಹಾಕಿಸಿ ಈತ ಫೋಟೋ ಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಮಗುವಿಗೆ ದರ್ಶನ್ಗೆ ಕೊಡಲಾದ ಕೈದಿ ನಂಬರ್ ನೀಡಿದ್ದಾನೆ. ಕೈ ಕೋಳದ ಮಾದರಿ, ಕೈದಿಗಳ ರೀತಿ ಬಿಳಿ ಬಟ್ಟೆ ಹಾಕಿಸಿದ್ದಾನೆ.
ನಟನ ಮೇಲಿನ ಹುಚ್ಚು ಅಭಿಮಾನಕ್ಕೆ ಅಭಿಮಾನಿಗಳಿಂದ ನಿತ್ಯ ಒಂದೊಂದು ಹೊಸ ಟ್ರೆಂಡ್ ಸೃಷ್ಟಿಯಾಗುತ್ತಿದೆ. ದರ್ಶನ್ಗೆ ನೀಡಿರುವ ಕೈದಿ ನಂಬರ್ ಧರಿಸಿಕೊಂಡು ಒಬ್ಬಾತ ಫೋಟೋ ಶೂಟ್ ಮಾಡಿಸಿಕೊಂಡಿದ್ದ. ಇದೀಗ ಮಗುವಿಗೆ ಹೀಗೆ ಫೋಟೋ ಶೂಟ್ ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಾನಾ ಥರದ ಅಭಿಪ್ರಾಯಗಳು ವ್ಯಕ್ತವಾಗಿವೆ.
ʼಹಿಂದೆಲ್ಲ ಮಕ್ಕಳಿಗೆ ಕೃಷ್ಣನ ವೇಷ, ಸ್ವಾಮಿ ವಿವೇಕಾನಂದರ ವೇಷ, ಅಂಬೇಡ್ಕರ್ ಅವರಂತಹ ಗಣ್ಯ ವ್ಯಕ್ತಿಗಳ ರೀತಿಯ ಫೋಟೋ ಶೂಟ್ ಟ್ರೆಂಡ್ ಆಗಿತ್ತು. ಆದರೆ ಈಗ ಬೆಳೆಯುವ ಮಗುವಿಗೆ ಕೈದಿ ಫೋಟೋ ಶೂಟ್ ಮಾಡಿಸೋದೆ ಟ್ರೆಂಡ್ ಆಗಿದೆʼ ಎಂದು ಒಬ್ಬರು ಹೇಳಿದ್ದಾರೆ. “ಈಗಿಂದಾನೇ ಮಗನನ್ನು ಜೈಲಿಗೆ ಕಳಿಸೋ ಪ್ಲಾನ್ ಇದು. ನಟ ಒಳ್ಳೇದು ಮಾಡಿದಾಗ ಅಭಿಮಾನಿಗಳು ಸಂಭ್ರಮಿಸಿ ತಪ್ಪೇನೂ ಇಲ್ಲ. ಆದರೆ ಕೆಟ್ಟದು ಮಾಡಿದಾಗ ಖಂಡಿಸಿʼ ಎಂದು ಮತ್ತೊಬ್ಬರು ಬರೆದಿದ್ದಾರೆ.
Actor Darshan Fan makes baby wear prison costume, photos go viral with cell no 6106 on the dress. Comments on Internet has slammed darshan fan for such photo shoot.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am