ಬ್ರೇಕಿಂಗ್ ನ್ಯೂಸ್
07-12-20 12:23 pm Source: FILMIBEAT ಕರ್ನಾಟಕ
ಬೆಂಗಳೂರು, ಡಿ.7: ರಾಜಕೀಯ ಪ್ರವೇಶದ ಹೊಸ್ತಿಲಲ್ಲಿರುವ ನಟ ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದು ಇಲ್ಲಿ ನೆಲೆಸಿರುವ ಸಹೋದರ ಸತ್ಯನಾರಾಯಣ ರಾವ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಡಿಸೆಂಬರ್ 31ರಂದು ರಾಜಕೀಯ ಪಕ್ಷ ಘೋಷಣೆ ಮಾಡಲಿರುವ ರಜನಿಕಾಂತ್ ಬೆಂಗಳೂರಿನಲ್ಲಿರುವ ತಮ್ಮ ಕುಟುಂಬದವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಸತ್ಯನಾರಾಯಣ ಅವರಿಂದ ಆಶೀರ್ವಾದ ಪಡೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಹಿಂದೆಯೂ ತಮಿಳು ಸೂಪರ್ ಸ್ಟಾರ್ ರಜನಿ, ಬೆಂಗಳೂರಿಗೆ ಆಗಮಿಸಿ ಕುಟುಂಬದವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.

ಕಳೆದ ವರ್ಷ ಅನಾರೋಗ್ಯದಿಂದ ಸಹೋದರ ಸತ್ಯನಾರಾಯಣ ರಾವ್ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆ ಸಮಯದಲ್ಲಿ ಅವರನ್ನು ನೋಡಲು ರಜನಿಕಾಂತ್ ಬೆಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದರು.
ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ರಜನೀಕಾಂತ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಲವು ಪಕ್ಷಗಳು ಯತ್ನಿಸಿದ್ದವು. ಆದರೆ ಯಾವುದೇ ಪಕ್ಷದ ಜೊತೆ ಗುರುತಿಸಿಕೊಳ್ಳದ ರಜನಿಕಾಂತ್ ಈಗ ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆ ಮಾಡುತ್ತಿದ್ದಾರೆ. ರಜನಿಕಾಂತ್ ಈಗಾಗಲೇ ಮಕ್ಕಳ್ ನಿಧಿ ಮಯಂ ಎಂಬ ಪಕ್ಷ ಸ್ಥಾಪಿಸಿದ್ದು ಮುಂದೆ ಇದನ್ನೇ ರಾಜಕೀಯ ಪಕ್ಷವಾಗಿ ಮಾಡುತ್ತಾರೆಯೇ ಅಥವಾ ಬೇರೆಯದ್ದೇ ಹೆಸರಲ್ಲಿ ಪಕ್ಷ ಸ್ಥಾಪಿಸುತ್ತಾರೆಯೇ ಎಂಬ ಕುತೂಹಲ ಎದ್ದಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm