ಬ್ರೇಕಿಂಗ್ ನ್ಯೂಸ್
12-07-24 05:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.12: ಪವರ್ ಟಿವಿ ಕನ್ನಡ ಸುದ್ದಿ ವಾಹಿನಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸೂಕ್ತ ಪರವಾನಗಿ ಇಲ್ಲದೆ ಪವರ್ ಟಿವಿ ಕಾರ್ಯ ನಿರ್ವಹಿಸುತ್ತಿತ್ತು ಅನ್ನುವ ಆರೋಪದಲ್ಲಿ ಕರ್ನಾಟಕ ಹೈಕೋರ್ಟ್ ಪ್ರಸಾರ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿತ್ತು.
ಈ ಸಂಬಂಧ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿ ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿತ್ತು. ಇದೀಗ ಈ ಆದೇಶದ ವಿರುದ್ಧ ಮೇಲ್ಮನವಿ ಹೋದ ಪವರ್ ಟಿವಿ ವಾಹಿನಿ ಪರವಾಗಿ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ಪೀಠವು, ಈ ವಿಚಾರದ ಕುರಿತಾಗಿ ನಾವು ಹೆಚ್ಚೇನು ಕೇಳಲು ಬಯಸೋದಿಲ್ಲ. ಸುದ್ದಿ ವಾಹಿನಿಯ ಪ್ರಸಾರ ನಿಲ್ಲಿಸುವುದು ರಾಜಕೀಯ ದ್ವೇಷದ ಕ್ರಮ ಅನ್ನೋದು ಸ್ಪಷ್ಟ ಎಂದಿದ್ದಾರೆ. ಸುದ್ದಿ ವಾಹಿನಿಯ ದನಿಯನ್ನು ಉಡುಗಿಸಬೇಕು ಅನ್ನುವ ಉದ್ದೇಶ ಇದರ ಹಿಂದಿದೆ. ಹೀಗಾಗಿ ವಾಹಿನಿ ಪ್ರಸಾರಕ್ಕೆ ತಡೆ ಹೇರಲಾಗಿತ್ತು. ಆದರೆ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಣೆ ಮಾಡೋದು ಸರ್ಕಾರಗಳ ಕರ್ತವ್ಯ ಎಂದು ಮುಖ್ಯ ನ್ಯಾಯಮೂರ್ತಿಗಳು ಚಾಟಿ ಬೀಸಿದ್ದಾರೆ.
ಜುಲೈ 9ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಸೋದಾಗಿ ಹೇಳಿರುವ ಸುಪ್ರೀಂ ಕೋರ್ಟ್, ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಹೀಗಾಗಿ, ಸ್ಥಗಿತಗೊಂಡಿರುವ ಪವರ್ ಟಿವಿ ಮತ್ತೆ ಕಾರ್ಯ ನಿರ್ವಹಿಸಲು ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಪವರ್ ಟಿವಿಯಲ್ಲಿ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಹಾಗೂ ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಸಮಗ್ರ ವರದಿ ಪ್ರಕಟವಾಗಿತ್ತು.
The Supreme Court on Friday granted interim relief to Kannada news channel Power TV and its affiliate Mitcoin Infrastructure by vacating an interim stay on the TV channel's broadcasts.Power TV is a Kannada news channel that had been at the forefront of reporting sexual abuse allegations against suspended Janata Dal (Secular) [JD (s)] leader Prajwal Revanna and his brother, Suraj Revanna.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm