ಬ್ರೇಕಿಂಗ್ ನ್ಯೂಸ್
13-07-24 10:47 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.13: ಯಲಹಂಕದ RMZ ಗ್ಯಾಲರಿಯಾ ರೆಸಿಡೆನ್ಸಿಸ್ ಅಪಾರ್ಟ್ಮೆಂಟ್ನಲ್ಲಿ ದಾರುಣ ಘಟನೆ ನಡೆದಿದೆ. ಮಗ ಹಾಗೂ ತಾಯಿ ಸತ್ತ 4 ದಿನದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಮಗನನ್ನು ನೇಣು ಬಿಗಿದು ಸಾಯಿಸಿದ ತಾಯಿ ಬಳಿಕ ಬೆಡ್ ಮೇಲೆ ಮಲಗಿಸಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಯಲಹಂಕ ಠಾಣಾ ಪೊಲೀಸರು ಅಪಾರ್ಟ್ಮೆಂಟ್ಗೆ ಭೇಟಿ ಕೊಟ್ಟು ಮೃತದೇಹವನ್ನ ಪೋಸ್ಟ್ ಮಾರ್ಟಂಗೆ ಕಳುಹಿಸಿದ್ದಾರೆ. ಈಶಾನ್ಯ ವಿಭಾಗದ ಡಿಸಿಪಿ ವಿ.ಜೆ. ಸಜಿತ್ ಅವರು ಈ ದುರಂತದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ್ದಾರೆ.
RMZ ಗ್ಯಾಲರಿಯಾ ರೆಸಿಡೆನ್ಸಿಸ್ ಅಪಾರ್ಟ್ಮೆಂಟ್ನಲ್ಲಿ ತಾಯಿ, ಮಗನ ಮೃತದೇಹ ಪತ್ತೆಯಾಗಿದೆ. ರಮ್ಯಾ ಮೂಲತಃ ಕೋಲಾರದವರು. ಆಂಧ್ರ ಮೂಲದ ಶ್ರೀಧರ್ ಪುಲಿವರ್ತಿ ಅವರನ್ನು ಮದುವೆ ಆಗಿದ್ದರು. ಶ್ರೀಧರ್ ಆಂಧ್ರ ಮೂಲದವರಾಗಿದ್ದಾರೆ. ರಮ್ಯಾ ಅವರ ಗಂಡ 3 ತಿಂಗಳ ಹಿಂದೆ ಸಾವನ್ನಪ್ಪಿದ್ದರು. ಗಂಡನ ಸಾವಿನ ಖಿನ್ನತೆಯಿಂದ ಹೊರ ಬರಲಾರದೆ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. FSL ವರದಿ, ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕ ಸಾವಿನ ಅಸಲಿ ಕಾರಣ ಗೊತ್ತಾಗಲಿದೆ ಎಂದು ಡಿಸಿಪಿ ವಿ.ಜೆ. ಸಜಿತ್ ಅವರು ತಿಳಿಸಿದ್ದಾರೆ.
ತಾಯಿ, ಮಗನ ಸಾವು ಆಗಿದ್ದು ಹೇಗೆ?
40 ವರ್ಷದ ರಮ್ಯಾ ಅವರು 13 ವರ್ಷದ ಭಾರ್ಗವ್ ಪುಲಿವರ್ತ ಎಂಬ ಮಗನನ್ನು ಮೊದಲಿಗೆ ಕೊಲೆ ಮಾಡಿದ್ದಾರೆ. ಮಗನ ಸಾವಿನ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತ ಶಂಕಿಸಲಾಗಿದೆ.
ರಮ್ಯಾ ಅವರ ಗಂಡ ಶ್ರೀಧರ್ ಪುಲಿವರ್ತ ಅವರು ಕಳೆದ ಮೂರು ತಿಂಗಳ ಹಿಂದೆ ಕ್ಯಾನ್ಸರ್ನಿಂದ ಸಾವನ್ನಪ್ಪಿದ್ದರು. ಇದರಿಂದ ಮಾನಸಿಕ ಖಿನ್ನತೆಯಲ್ಲಿದ್ದ ತಾಯಿ ಮಗನನ್ನು ಕೊಂದು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಸತ್ತ 4 ದಿನದ ಬಳಿಕ ಬಯಲು!
ರಮ್ಯಾ ಅವರ 19 ವರ್ಷದ ಮಗಳು ಪಿಜಿಯಲ್ಲಿದ್ದಾಳೆ. ಕಳೆದ ಜುಲೈ 9ನೇ ತಾರೀಖು ರಾತ್ರಿ ಮಗಳ ಜೊತೆ ರಮ್ಯಾ ಮಾತನಾಡಿದ್ದರು. ಅದಾದ ಮೇಲೆ ರಮ್ಯಾ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಮನೆಯಲ್ಲಿ ರಮ್ಯಾ ಅವರು ಮೊದಲು ಮಗನನ್ನು ನೇಣು ಹಾಕಿದ್ದಾರೆ. ಮಗನನ್ನು ನೇಣಿನ ಕುಣಿಕೆಯಿಂದ ಬಿಡಿಸಿ ಬೆಡ್ ಮೇಲೆ ಮಲಗಿಸಿದ್ದಾರೆ. ಆನಂತರ ತಾಯಿ ಕೂಡ ನೇಣಿಗೆ ಶರಣಾಗಿದ್ದಾರೆ. ತಾಯಿ, ಮಗ ಇಬ್ಬರು ಸತ್ತ ನಾಲ್ಕು ದಿನದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.
ತಾಯಿ, ಮಗ ಸಾವಿಗೆ ಕಾರಣವೇನು?
ರಮ್ಯಾ ಅವರು ಶ್ರೀಧರ್ ಎಂಬುವವರನ್ನು ಲವ್ ಮಾಡಿ ಅಂತರ್ಜಾತಿ ವಿವಾಹವಾಗಿದ್ದರು. ಗಂಡನ ಸಾವಿನ ನಂತರ ಇಡೀ ಕುಟುಂಬ ಆರ್ಥಿಕವಾಗಿ ಕುಗ್ಗಿ ಹೋಗಿತ್ತು. ಅಲ್ಲದೇ ಗಂಡ ಸತ್ತ ನಂತರ ತಾವು ಸಾಯುವುದಾಗಿ ರಮ್ಯಾ ಹೇಳಿಕೊಂಡಿದ್ದರಂತೆ.
ರಮ್ಯಾ ಅವರ ಕುಟುಂಬಕ್ಕೆ ಫ್ಲ್ಯಾಟ್ ಬಾಡಿಗೆ 45 ಸಾವಿರ, ಶಾಲೆ ಫೀಸ್, ಮನೆ ನಿರ್ವಹಣೆ ಖರ್ಚು ಅಂತ ತಿಂಗಳಿಗೆ ಲಕ್ಷ, ಲಕ್ಷ ಹಣ ಬೇಕಿತ್ತು. ಹಣ ಹೊಂದಿಸೋದು ರಮ್ಯಾಳಿಗೆ ಆಗುತ್ತಿರಲಿಲ್ಲ. ಇದೇ ಕಾರಣಕ್ಕೆ ಖಿನ್ನತೆಗೊಳಗಾಗಿದ್ದ ರಮ್ಯಾ ಅವರು ಪೊಲೀಸರು, ಡಾಕ್ಟರ್ಗೆ ಮತ್ತು ಮಗಳಿಗೆ ಪತ್ರ ಬರೆದು ನೇಣಿಗೆ ಶರಣಾಗಿದ್ದಾರೆ.
The incident took place at RMZ Galleria Residency Apartments in Yelahanka. The incident came to light four days after the death of his son and mother. According to preliminary investigations, the mother hanged her son to death and later committed suicide by lying on the bed. Yelahanka police visited the apartment and sent the body for post-mortem. DCP (Northeast) V.J. Sajith has given more information about the tragedy.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am