ಬ್ರೇಕಿಂಗ್ ನ್ಯೂಸ್
23-07-24 01:13 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.23: ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ಪರಿಷತ್ತಿನ ವಿಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಿಂದ ಪರಿಶಿಷ್ಟ ಸಮುದಾಯದ ಪ್ರಭಾವಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್ ಮಾಡಿ ಛಲವಾದಿ ನಾರಾಯಾಣಸ್ವಾಮಿಗೆ ಅಭಿನಂದನೆ ತಿಳಿಸಿದ್ದಾರೆ. ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ಹೋರಾಟ ನಡೆಸಿಕೊಂಡು ಬಂದ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಠರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ 'ಸಾಮಾಜಿಕ ನ್ಯಾಯ' ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ ಎಂದು ಹೇಳಿದ್ದಾರೆ.


ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ -ಚಿಕ್ಕಮಗಳೂರು ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಇದೀಗ ಪಕ್ಷವು ವಿಪಕ್ಷ ನಾಯಕನ ಸ್ಥಾನಕ್ಕೆ ಛಲವಾದಿ ನಾರಾಯಣ ಸ್ವಾಮಿ ಅವರನ್ನು ನೇಮಿಸಿದೆ. ಸಿಟಿ ರವಿ ಆ ಸ್ಥಾನಕ್ಕೇರುತ್ತಾರೆಂದು ಹೇಳಲಾಗಿತ್ತು. ಇತ್ತೀಚೆಗೆ ಸಿಟಿ ರವಿ ಪರಿಷತ್ ಸದಸ್ಯರಾದ ಸಂದರ್ಭದಲ್ಲಿ ಅವರೇ ಮೇಲ್ಮನೆ ನಾಯಕ ಸ್ಥಾನಕ್ಕೇರುತ್ತಾರೆಂದು ಬಿಂಬಿತವಾಗಿತ್ತು. ವಿಧಾನಸಭೆ ವಿಪಕ್ಷ ನಾಯಕ ಸ್ಥಾನದಲ್ಲೂ ಒಕ್ಕಲಿಗ ವರ್ಗದ ಆರ್.ಅಶೋಕ್ ಇರುವುದರಿಂದ ಸಿಟಿ ಸೀಟು ತಪ್ಪಿಸಿಕೊಂಡಿದ್ದಾರೆ.
ಮೇಲ್ಮನೆಯಲ್ಲಿ ಎನ್ಡಿಎ ಬಹುಮತ ಹೊಂದಿದ್ದು ಕಾಂಗ್ರೆಸ್ 35 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಿದ್ದರೂ, ಬಿಜೆಪಿ - 25 ಹಾಗೂ ಅದರ ಮಿತ್ರ ಪಕ್ಷ ಜೆಡಿಎಸ್ 8 ಮತ್ತು ಸ್ವತಂತ್ರ ಸದಸ್ಯರನ್ನು ಸೇರಿಸಿದರೆ ಒಟ್ಟು 38 ಸ್ಥಾನಗಳನ್ನು ಹೊಂದಿದೆ.
Chalavadi Narayana Swamy appointed as opposition leader by BJP in the place of Kota Srinivas Poojary.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm