ಬ್ರೇಕಿಂಗ್ ನ್ಯೂಸ್
29-07-24 10:41 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29: ಲೋಕಸಭೆಯಲ್ಲಿ ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಮಂದಿಯನ್ನು ಸಚೇತಕರನ್ನಾಗಿ ನೇಮಕ ಮಾಡಿ ಬಿಜೆಪಿ ಸಂಸದೀಯ ಮಂಡಳಿ ಕಾರ್ಯದರ್ಶಿ ಶಿವಶಕ್ತಿನಾಥ್ ಭಕ್ಷಿ ಅವರು ಸೋಮವಾರ (ಜುಲೈ 29) ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಚೇತಕ ಹುದ್ದೆ ಪಡೆದಿದ್ದಾರೆ.
ಡಾ.ಸಂಜಯ್ ಜೈಸ್ವಾಲ್ ಅವರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿದ್ದರೆ, ಇನ್ನುಳಿದ 16 ಜನರನ್ನು ಸಚೇತಕರನ್ನಾಗಿ ನೇಮಿಸಲಾಗಿದೆ. 16 ಜನರ ಸಚೇತಕರ ಪೈಕಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಸ್ಥಾನ ಸಿಕ್ಕಿದೆ. ಈಮೂಲಕ ತಳಹಂತದಿಂದ ಮೇಲಕ್ಕೆ ಬಂದಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರ ರಾಜಕಾರಣದಲ್ಲಿಯೂ ಮತ್ತೊಂದು ಹಂತಕ್ಕೆ ಹೋಗಿದ್ದಾರೆ.
ತಮ್ಮನ್ನು ಸಚೇತಕರನ್ನಾಗಿ ನೇಮಕ ಮಾಡಿದ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೋಟಾ ಶ್ರೀನಿವಾಸ ಪೂಜಾರಿ ಧನ್ಯವಾದ ತಿಳಿಸಿದ್ದಾರೆ. ಪಕ್ಷದ ಸಂಸದೀಯ ಮಂಡಳಿಯು ನನ್ನನ್ನು ಲೋಕಸಭಾ ಸಚೇತಕ ಹುದ್ದೆಗೆ ಪರಿಗಣಿಸಿ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರಿಗೆ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ವಿಪಕ್ಷ ನಾಯಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಿಜೆಪಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ನೀಡಿತ್ತು. ಅದರಂತೆ ಈ ಕ್ಷೇತ್ರದಲ್ಲಿ ಗೆದ್ದ ಕೋಟ ಶ್ರೀನಿವಾಸ್ ಪೂಜಾರಿ ಸಂಸತ್ ಪ್ರವೇಶಿಸಿದ್ದಾರೆ. ಇದೀಗ ಇವರನ್ನು ಲೋಕಸಭೆಯಲ್ಲಿ ಸಚಿವ ಸ್ಥಾನ ಸಿಗದಿದ್ದರೂ ಪಕ್ಷದ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.
Bjp parliamentary board secretary Shivshaktinath Bakshi on Monday (July 29) issued an order appointing one chief whip and 16 as whips in the Lok Sabha. Udupi-Chikkamagaluru MP Kota Srinivas Poojary has been appointed as the whip.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm