ಬ್ರೇಕಿಂಗ್ ನ್ಯೂಸ್
01-08-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 1: ಮೂಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತನಿಖೆಯ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿರುವ ಶೋಕಾಸ್ ನೋಟಿಸ್ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಿಎಂ ಅನುಪಸ್ಥಿತಿಯಲ್ಲಿ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು ನೋಟಿಸ್ ಹಿಂಪಡೆಯಬೇಕೆಂದು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ರಾಜ್ಯಪಾಲರು ಮುಖ್ಯಮಂತ್ರಿಗೆ ನೀಡಿರುವ ನೋಟಿಸ್ ಅನ್ನು ಹಿಂಪಡೆಯಬೇಕು ಹಾಗೂ ದೂರುದಾರ ಟಿಜೆ ಅಬ್ರಹಾಂ ನೀಡಿರುವ ಅರ್ಜಿಯನ್ನು ತಿರಸ್ಕಾರ ಮಾಡಬೇಕು ಎಂದು ರಾಜ್ಯಪಾಲರಿಗೆ ಒತ್ತಾಯಿಸಿ ಸಂಪುಟ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ. ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, "ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಮಾರಕ ಆಗುವ ಪರಿಸ್ಥಿತಿ ಕೇಂದ್ರ ಸರ್ಕಾರದಿಂದ ನಡೆಯುತ್ತಿದೆ. 136 ಸ್ಥಾನ ಗೆದ್ದು ಸರ್ಕಾರ ರಚನೆ ಮಾಡಲಾಗಿದೆ. ಕಾನೂನು ಹಾಗೂ ಸಂವಿಧಾನಕ್ಕೆ ನಾವು ಗೌರವ ಕೊಡುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಟಿಜೆ ಅಬ್ರಹಾಂ ಎಂಬ ವ್ಯಕ್ತಿಯ ಮೂಲಕ ದೂರು ಕೊಡಿಸಲಾಗಿದೆ. ಜುಲೈ 26ರಂದು ಸಿದ್ದರಾಮಯ್ಯ ವಿರುದ್ಧ ಅಬ್ರಹಾಂ ದೂರು ನೀಡುತ್ತಾರೆ. ಇದೇ ವೇಳೆ ಜುಲೈ 5 ರಂದು ಮೂಡಾದಲ್ಲಿ ಹಗರಣ ಆಗಿದೆ ಎಂದು ರಾಜ್ಯಪಾಲರಿಂದ ನೋಟಿಸ್ ಕೊಡಲಾಗಿದೆ ಎಂದು ಹೇಳಿದರು.
ಜುಲೈ 15ರಂದು ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಮೂಡಾದಲ್ಲಿ ಅಕ್ರಮವಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದರು. ಆದರೆ, ಟಿಜೆ ಅಬ್ರಹಾಂ ದೂರು ಕೊಟ್ಟ ದಿನದಂದೇ ಗವರ್ನರ್ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ. ಅಲ್ಲದೆ, 7 ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚಿಸಿದ್ದಾರೆ. ಈ ರೀತಿಯ ನಡೆಯನ್ನು ನಾವು ವಿರೋಧಿಸುತ್ತೇವೆ ಎಂದು ಆಕ್ಷೇಪಿಸಿದರು. ಈಗಾಗಲೇ ಪ್ರಕರಣದಲ್ಲಿ ನ್ಯಾಯಾಂಗ ತನಿಖೆ ನಡೆಯುತ್ತಿದೆ. ಹಾಗಿದ್ದರೂ ಇಷ್ಟು ತರಾತುರಿಯಲ್ಲಿ ಶೋಕಾಸ್ ನೋಟಿಸ್ ಕೊಡುತ್ತಾರೆ ಎಂದರೆ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.
In a major political development, Governor Thaawarchand Gehlot is learnt to have issued a “showcause notice” to Chief Minister Siddaramaiah seeking more explanation from him on the alleged irregularities in allotment of sites by the Mysuru Urban Development Authority (MUDA) to his wife.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 03:44 pm
HK News Staffer
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm