ಬ್ರೇಕಿಂಗ್ ನ್ಯೂಸ್
03-08-24 07:38 pm HK News Desk ಕರ್ನಾಟಕ
ಸಕಲೇಶಪುರ, ಆಗಸ್ಟ್.3: ಬೆಂಗಳೂರು ಮತ್ತು ಕರಾವಳಿ ನಗರಿ ಮಂಗಳೂರು ನಡುವೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಶಿರಾಡಿ ಘಾಟ್ ಭೂಕುಸಿತ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿದ್ದಾರೆ. ಮೈಸೂರಿನಿಂದ ರಸ್ತೆ ಮಾರ್ಗದಲ್ಲೇ ಬಂದ ಮುಖ್ಯಮಂತ್ರಿ ಶಿರಾಡಿ ಗುಡ್ಡ ಕುಸಿತದ ಭೀಕರತೆ ಕಂಡು ಶಾಕ್ ಆಗಿದ್ದಾರೆ. ಗುಡ್ಡ ಕಡಿಯುವಾಗ ಯಾಕೆ ಎಚ್ಚರ ವಹಿಸಿಲ್ಲ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಕಲೇಶಪುರ ಬಳಿಯ ದೊಡ್ಡ ತಪ್ಪಲು ಎಂಬಲ್ಲಿ ಮತ್ತೆ ಗುಡ್ಡ ಕುಸಿದಿದ್ದು ಇದರಿಂದಾಗಿ ಈ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ಗುಡ್ಡ ಕುಸಿತಕ್ಕೆ ಇದೇ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂ ಗೆ ವಿವರಿಸಿದರು. "ಒಟ್ಟು 45 ಕಿ.ಮೀ ನಲ್ಲಿ 35 ಕಿ.ಮೀ ಹೈವೇ ಕಾಮಗಾರಿ ಮುಗಿದಿದೆ. 10 ಕಿ.ಮೀ ಬಾಕಿ ಇದೆ. ಆದರೆ ಇಲ್ಲಿಯ ವರೆಗೂ ಎಲ್ಲಿಯೂ ರಸ್ತೆಗೆ ತಡೆಗೋಡೆ ನಿರ್ಮಿಸಿಲ್ಲ. ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಗಮನಕ್ಕೆ ತಂದರು.
ಮಣ್ಣು ಕುಸಿತದಿಂದ ರಸ್ತೆಯಲ್ಲಿ ನಿಂತಿರುವ ಮೊಣಕಾಲುದ್ದುದ ಕೆಸರಲ್ಲೇ ನಡೆದುಕೊಂಡೇ ಗುಡ್ಡ ಕುಸಿತ ಪ್ರದೇಶವನ್ನು ಪರಿಶೀಲಿಸಿದ ಮುಖ್ಯಮಂತ್ರಿ ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ SDRF ತಂಡದೊಂದಿಗೂ ಮಾಹಿತಿ ಪಡೆದರು. ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರ ಮುಂದೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟರು. ಈ ರೀತಿ ಘಾಟ್ ಪ್ರದೇಶದ ಗುಡ್ಡ ಅಗೆಯುವಾಗ ಯಾಕೆ ಮಣ್ಣಿನ ಸುರಕ್ಷತೆ ಬಗ್ಗೆ ಕ್ರಮಗಳನ್ನು ಕೈಗೊಂಡಿಲ್ಲ. ಲಂಬವಾಗಿ ಗುಡ್ಡ ಕಡಿದು ಕಡಿಮೆ ಹಣದಲ್ಲಿ ಕಾಮಗಾರಿ ಮುಗಿಸಬೇಕೆಂದು ಯೋಜನೆ ಹಾಕಿದ್ದೀರಾ.. ತಡೆಗೋಡೆ ಕಟ್ಟುತ್ತಿದ್ದರೆ ಈ ರೀತಿ ಕುಸಿತ ಆಗುತ್ತಿತ್ತಾ.. ರಸ್ತೆ ವಿಸ್ತರಣೆ ಕಾರಣಕ್ಕೆ ಘಾಟ್ ಪ್ರದೇಶವನ್ನು ಒಟ್ಟಾರೆ ಅಗೆದು ಹಾಕೋದಾ ಎಂದು ಪ್ರಶ್ನೆ ಮಾಡಿದರು. ಕೂಡಲೇ ಈ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.
Karnataka CM Siddaramaiah visits the Shiradi Ghat hill collapse site to inspects and issues instructions to the regional officer of the National Highway Authority in Hassan on Saturday August 03, 2024
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 03:44 pm
HK News Staffer
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm