ಬ್ರೇಕಿಂಗ್ ನ್ಯೂಸ್
05-08-24 02:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.5: ಬೆಂಗಳೂರು ನಗರದಲ್ಲಿ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯಿಂದ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಂತೆ, ಬೆಂಗಳೂರು ನಗರದಾದ್ಯಂತ ಪ್ರತಿ ಶನಿವಾರ ಮತ್ತು ಇತರೇ ದಿನಗಳಲ್ಲಿ ಬೆಳಗ್ಗೆ, ಸಂಜೆ ಎಲ್ಲ ರೀತಿಯ ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.
ವೀಕೆಂಡಲ್ಲಿ ಟ್ರಾಫಿಕ್ ಹೆಚ್ಚಿರುವುದರಿಂದ ಪ್ರತಿ ಶನಿವಾರಗಳಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ಮತ್ತು ಸಂಜೆ 4.30 ರಿಂದ ರಾತ್ರಿ 9ರ ವರೆಗೆ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇತರ ದಿನಗಳಲ್ಲಿ ಬೆಳಗ್ಗೆ 7 ರಿಂದ ಪೂರ್ವಾಹ್ನ 11ರ ವರೆಗೆ ಮತ್ತು ಸಂಜೆ 4 ರಿಂದ ರಾತ್ರಿ 10ರ ವರೆಗಿನ ನಿರ್ಬಂಧವಿದ್ದು ಅದು ಮುಂದುವರಿಯಲಿದೆ.
ವಾರಾಂತ್ಯ ದಿನಗಳಲ್ಲಿ ಹೆಚ್ಚಿನ ದಟ್ಟಣೆ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರ ನಡುವೆ ಇರುತ್ತದೆ. ಶನಿವಾರ ಮಧ್ಯಾಹ್ನ 1 ಗಂಟೆಯಷ್ಟೊತ್ತಿಗೆ ಸಂಚಾರ ದಟ್ಟಣೆ ತೀವ್ರಗೊಳ್ಳುತ್ತದೆ. ಪೀಕ್ ಅವರ್ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2:30ರ ವರೆಗೆ ಮತ್ತು ಸಂಜೆ 5 ರಿಂದ ರಾತ್ರಿ 8:30ರ ವರೆಗೆ ಇರುತ್ತದೆ. ಹಾಗಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
ಘನ ವಾಹನಗಳ ನಿರ್ಬಂಧವು ವಾರಾಂತ್ಯದಲ್ಲಿ ನಗರ ಎದುರಿಸುವ ತೀವ್ರ ಟ್ರಾಫಿಕ್ ದಟ್ಟಣೆಯನ್ನು ಪರಿಹರಿಸುವ ಉದ್ದೇಶ ಹೊಂದಿದೆ. ಇದರಿಂದ ಸಾಮಾನ್ಯ ಪ್ರಯಾಣಿಕರಿಗೆ ಸಂಚಾರ ಸುಗಮವಾಗಲಿದೆ ಎಂದು ತಿಳಿಸಿದ್ದಾರೆ.
Bengaluru Traffic Police is taking many measures to control traffic in the city. Communicating traffic rules to motorists and pedestrians. Also implementing new initiatives. Now they have made some changes in the traffic time of heavy goods vehicle within the city.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm