ಬ್ರೇಕಿಂಗ್ ನ್ಯೂಸ್
08-08-24 11:20 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 8: ತೀರ್ಥಹಳ್ಳಿಯಲ್ಲಿ ಅಕ್ರಮ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್ಎಫ್ಒ) ಲೋಕೇಶ್ ಅವರನ್ನು ಎರಡೇ ದಿನಗಳಲ್ಲಿ ವರ್ಗಾವಣೆ ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ತುಂಗಾ ನದಿ ದಡದಲ್ಲಿ ವಿಹಂಗಮ ಹಾಲಿಡೇ ರೆಸಾರ್ಟ್ ಬಫರ್ ಝೋನ್ ಒಳಗೆ ಕಾರ್ಯಾಚರಿಸುತ್ತಿದ್ದು, ಕೃಷಿ ಚಟುವಟಿಕೆ, ರೆಸಾರ್ಟ್ ಜೊತೆಗೆ ವಾಣಿಜ್ಯ ಚಟುವಟಿಕೆಗಳೂ ನಡೆಯುತ್ತಿವೆ. ಇದಕ್ಕೆ ಅನುಮತಿ ನೀಡಿದವರು ಯಾರೆಂದು ಹೋರಾಟಗಾರ ಎಚ್.ಎಂ ವೆಂಕಟೇಶ್ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಿವಮೊಗ್ಗ ಜಿಲ್ಲಾಡಳಿತವನ್ನು ಪ್ರಶ್ನಿಸಿ, ಪತ್ರ ಬರೆದಿದ್ದರು.
ಜಿಲ್ಲಾಡಳಿತದಿಂದ ಪತ್ರ ಬಂದಿದ್ದರಿಂದ ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್ ಸ್ಥಳಕ್ಕೆ ತೆರಳಿ, ಅರಣ್ಯ ಪ್ರದೇಶ ಒತ್ತುವರಿ ಮಾಡಿ ರೆಸಾರ್ಟ್ ನೆಪದಲ್ಲಿ ಅರಣ್ಯ ಕಾಯ್ದೆ ಉಲ್ಲಂಘಿಸಿದ್ದಾರೆ. ಅದನ್ನು ಕೂಡಲೇ ತೆರವುಗೊಳಿಸಲು ವರದಿ ನೀಡಿದ್ದರು. ವರದಿ ನೀಡಿದ ಎರಡೇ ದಿನದಲ್ಲಿ ಡಾ. ಲೋಕೇಶ್ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಲೋಕೇಶ್ ಅವರು ತೀರ್ಥಹಳ್ಳಿಗೆ ಬಂದು, ಕೇವಲ ಒಂದು ವರ್ಷ 9 ತಿಂಗಳು ಮಾತ್ರ ಆಗಿದ್ದು, 2 ವರ್ಷ ಪೂರ್ಣ ಆಗಿಲ್ಲ. ಅದಕ್ಕೂ ಮೊದಲೇ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಈ ವರ್ಗಾವಣೆಗೆ ತಡೆ ನೀಡುವಂತೆ ಲೋಕೇಶ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ವಿಹಂಗಮ ರೆಸಾರ್ಟ್ ವಿರುದ್ಧ ಬಂದಿದ್ದ ದೂರನ್ನು ಆಧರಿಸಿ, ವರದಿ ನೀಡಿದ್ದೇನೆ. ಎಫ್ ಐ ಆರ್ ಮಾಡಿ ಕ್ರಮ ಜರುಗಿಸಲು ತಿಳಿಸಿದ್ದೇನೆ. ವರದಿ ಕೊಟ್ಟ ಮಾರನೇ ದಿನಕ್ಕೆ ವರ್ಗಾವಣೆ ಆದೇಶ ಬಂದಿದೆ. ಹಾಗಾಗಿ, ನನ್ನ ಮೇಲೆ ವರ್ಗಾವಣೆ ಅಸ್ತ್ರ ಪ್ರಯೋಗ ಆಗಿರಬಹುದು ಎಂದು ಡಾ.ಲೋಕೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.
Shivamogga forest officer transferred for vacating resort in forest area in Shivamogga
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 03:44 pm
HK News Staffer
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm