ಬ್ರೇಕಿಂಗ್ ನ್ಯೂಸ್
08-08-24 11:20 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 8: ತೀರ್ಥಹಳ್ಳಿಯಲ್ಲಿ ಅಕ್ರಮ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್ಎಫ್ಒ) ಲೋಕೇಶ್ ಅವರನ್ನು ಎರಡೇ ದಿನಗಳಲ್ಲಿ ವರ್ಗಾವಣೆ ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ತುಂಗಾ ನದಿ ದಡದಲ್ಲಿ ವಿಹಂಗಮ ಹಾಲಿಡೇ ರೆಸಾರ್ಟ್ ಬಫರ್ ಝೋನ್ ಒಳಗೆ ಕಾರ್ಯಾಚರಿಸುತ್ತಿದ್ದು, ಕೃಷಿ ಚಟುವಟಿಕೆ, ರೆಸಾರ್ಟ್ ಜೊತೆಗೆ ವಾಣಿಜ್ಯ ಚಟುವಟಿಕೆಗಳೂ ನಡೆಯುತ್ತಿವೆ. ಇದಕ್ಕೆ ಅನುಮತಿ ನೀಡಿದವರು ಯಾರೆಂದು ಹೋರಾಟಗಾರ ಎಚ್.ಎಂ ವೆಂಕಟೇಶ್ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಿವಮೊಗ್ಗ ಜಿಲ್ಲಾಡಳಿತವನ್ನು ಪ್ರಶ್ನಿಸಿ, ಪತ್ರ ಬರೆದಿದ್ದರು.
ಜಿಲ್ಲಾಡಳಿತದಿಂದ ಪತ್ರ ಬಂದಿದ್ದರಿಂದ ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್ ಸ್ಥಳಕ್ಕೆ ತೆರಳಿ, ಅರಣ್ಯ ಪ್ರದೇಶ ಒತ್ತುವರಿ ಮಾಡಿ ರೆಸಾರ್ಟ್ ನೆಪದಲ್ಲಿ ಅರಣ್ಯ ಕಾಯ್ದೆ ಉಲ್ಲಂಘಿಸಿದ್ದಾರೆ. ಅದನ್ನು ಕೂಡಲೇ ತೆರವುಗೊಳಿಸಲು ವರದಿ ನೀಡಿದ್ದರು. ವರದಿ ನೀಡಿದ ಎರಡೇ ದಿನದಲ್ಲಿ ಡಾ. ಲೋಕೇಶ್ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಲೋಕೇಶ್ ಅವರು ತೀರ್ಥಹಳ್ಳಿಗೆ ಬಂದು, ಕೇವಲ ಒಂದು ವರ್ಷ 9 ತಿಂಗಳು ಮಾತ್ರ ಆಗಿದ್ದು, 2 ವರ್ಷ ಪೂರ್ಣ ಆಗಿಲ್ಲ. ಅದಕ್ಕೂ ಮೊದಲೇ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಈ ವರ್ಗಾವಣೆಗೆ ತಡೆ ನೀಡುವಂತೆ ಲೋಕೇಶ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ವಿಹಂಗಮ ರೆಸಾರ್ಟ್ ವಿರುದ್ಧ ಬಂದಿದ್ದ ದೂರನ್ನು ಆಧರಿಸಿ, ವರದಿ ನೀಡಿದ್ದೇನೆ. ಎಫ್ ಐ ಆರ್ ಮಾಡಿ ಕ್ರಮ ಜರುಗಿಸಲು ತಿಳಿಸಿದ್ದೇನೆ. ವರದಿ ಕೊಟ್ಟ ಮಾರನೇ ದಿನಕ್ಕೆ ವರ್ಗಾವಣೆ ಆದೇಶ ಬಂದಿದೆ. ಹಾಗಾಗಿ, ನನ್ನ ಮೇಲೆ ವರ್ಗಾವಣೆ ಅಸ್ತ್ರ ಪ್ರಯೋಗ ಆಗಿರಬಹುದು ಎಂದು ಡಾ.ಲೋಕೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.
Shivamogga forest officer transferred for vacating resort in forest area in Shivamogga
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 08:42 pm
HK News Staffer
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm