ಬ್ರೇಕಿಂಗ್ ನ್ಯೂಸ್
09-08-24 01:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 9: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಷಿಕ್ಯೂಷನ್ ಗೆ ಅನುಮತಿ ನೀಡುತ್ತಾರೆಯೇ ಎಂಬ ಕುತೂಹಲ ಎದ್ದಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಮನವಿಗೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಸಂಸತ್ ಅಧಿವೇಶನ ಮುಗಿದ ಬೆನ್ನಲ್ಲೇ ರಾಜ್ಯಪಾಲರು ತಮ್ಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇದೇ ವೇಳೆ, ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ ವಹಿಸುವ ಕುರಿತು ಚಿಂತನೆ ನಡೆಸುತ್ತಿದ್ದಾರೆಂಬ ವದಂತಿ ಹಬ್ಬಿದೆ.
ಜುಲೈ 26ರಂದು ಅಬ್ರಹಾಂ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಅದೇ ದಿನ ಸಿಎಂಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಇದರ ಬೆನ್ನಲ್ಲೇ ಆಗಸ್ಟ್ 1 ರಂದು, ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೋಟಿಸ್ ವಾಪಸ್ ಪಡೆಯಲು ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಅಲ್ಲದೆ, ಅರ್ಜಿಯನ್ನು ತಿರಸ್ಕರಿಸುವಂತೆಯೂ ಆಗ್ರಹಿಸಲಾಗಿತ್ತು. ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುತ್ತಾರೆಯೇ ಎಂಬ ಕುರಿತು ಕುತೂಹಲ ಮೂಡಿದೆ.
ಈ ನಡುವೆ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವೆ ಘರ್ಷಣೆಯಾಗದಂತೆ ನೋಡಿಕೊಳ್ಳಲು ರಾಜ್ಯಪಾಲ ಗೆಹ್ಲೋಟ್ ಅವರು ಕಾನೂನು ಸಲಹೆಗಾರರ ಅಭಿಪ್ರಾಯವನ್ನೂ ತೆಗೆದುಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್, ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಸರಕಾರ ಸಲಹೆಯನ್ನು ನೀಡಿದಾಗ ರಾಜ್ಯಪಾಲರು ಇದಕ್ಕೆ ಅನುಗುಣವಾಗಿರುತ್ತಾರೆ ಎಂಬ ಭರವಸೆ ನನಗಿದೆ. 163ನೇ ವಿಧಿಯು ರಾಜ್ಯಪಾಲರು ತಮ್ಮ ವಿವೇಚನೆಯನ್ನು ಬಳಸಬಹುದು ಎಂದು ಹೇಳುತ್ತದೆ. ಆದರೆ, ಅದನ್ನು ಬಿಜೆಪಿಗೆ ಅನುಕೂಲವಾಗುವ ರೀತಿ ಬಳಸುವಂತಿಲ್ಲ. ರಾಜ್ಯಪಾಲರು ಮಂತ್ರಿಮಂಡಲದ ನೆರವು ಮತ್ತು ಸಲಹೆಯನ್ನು ಮೀರಿ ಹೋಗಬಾರದು ಎಂದವರು ತಿಳಿಸಿದ್ದಾರೆ.
ಶೋಕಾಸ್ ನೋಟಿಸ್ ನೀಡದೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಅಧಿಕಾರ ರಾಜ್ಯಪಾಲರಿಗಿತ್ತು. ಆದರೆ, ಅವರು ನೋಟಿಸ್ ನೀಡಿರುವುದು ಮುಖ್ಯಮಂತ್ರಿಗಳಿಗೆ ವರವಾಗಿ ಪರಿಣಮಿಸಿದೆ. ಈ ನಡುವೆ ಪ್ರಕರಣವನ್ನು ಸಿಬಿಐಗೆ ವಹಿಸುವ ಆಲೋಚನೆ ಕೂಡ ರಾಜ್ಯಪಾಲರಿಗೆ ಇರಬಹುದು ಎಂದು ತಜ್ಞರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಜುಲೈ 25ರಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ-ಜೆಡಿಎಸ್ ನಿಯೋಗ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿತ್ತು.
ಸಂಸತ್ ಅಧಿವೇಶನ ಸಂದರ್ಭದಲ್ಲಿ ತನಿಖೆಗೆ ಅನುಮತಿ ನೀಡಿದಲ್ಲಿ ವಿಪಕ್ಷಗಳು ಗಲಾಟೆ ಎಬ್ಬಿಸುವ ಸಾಧ್ಯತೆ ಇರುವುದರಿಂದ ತಡವಾಗಿಯೇ ಪ್ರಾಸಿಕ್ಯೂಶನ್ ಅನುಮತಿ ನೀಡಲು ರಾಜ್ಯಪಾಲರು ಮುಂದಾಗಿದ್ದಾರೆ ಎನ್ನಲಾಗಿತ್ತಿದೆ.
Governor Thawar Chend Gehlot has not taken any further action regarding the plea filed by TJ Abraham seeking permission to prosecute Chief Minister Siddaramaiah in the Muda land allotment scam. Meanwhile, speculations have started that they are thinking about handing over the case to the Central Bureau of Investigation (CBI) for investigation.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm