ಬ್ರೇಕಿಂಗ್ ನ್ಯೂಸ್
09-08-24 03:36 pm HK News Desk ಕರ್ನಾಟಕ
ಶಿವಮೊಗ್ಗ, ಆ.09: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಮತ್ತಿಕೈ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಂಪಕಾಪುರ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ.
ಚಂಪಕಾಪುರ ಗ್ರಾಮದ ನಿವಾಸಿ ರಾಜೇಶ್ ಎಂಬವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ (12) ಹಾಗೂ ಸಂಪದ (6) ಮೃತ ದುರ್ದೈವಿಗಳು. ಕೌಟಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಬಾವಿಗೆ ಬಿದ್ದಿದ್ದ ಮೂವರನ್ನೂ ಗ್ರಾಮಸ್ಥರು ರಕ್ಷಿಸಲು ಪ್ರಯತ್ನಿಸಿದರು. ಆದರೆ, ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಬಾವಿಯಿಂದ ಹೊರ ತೆಗೆಯುವಷ್ಟರಲ್ಲಿ ಮೂವರೂ ಮೃತರಾಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ವಾಣಿ ಪತಿ ರಾಜೇಶ್ ಮತ್ತಿಕೈ ಗ್ರಾಮದಲ್ಲಿ ಟಿವಿ ರಿಪೇರಿ ಕೆಲಸ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಹೊಸನಗರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ತಾಯಿ, ಮಕ್ಕಳಿಬ್ಬರ ಸಾವಿನ ಕುರಿತು ಮಾತನಾಡಿರುವ ಸ್ಥಳೀಯರಾದ ಸುಬ್ರಮಣ್ಯ ಅವರು, ಚಂಪಕಪುರದ ರಾಜೇಶ್ ಅವರ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ನಮಗೆ ಅಚ್ಚರಿ ತಂದಿದೆ. ರಾಜೇಶ್ ಟಿವಿ ರಿಪೇರಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾನೆ. ಆತ ಒಳ್ಳೆಯ ವ್ಯಕ್ತಿಯಾಗಿದ್ದಾನೆ. ಆದರೆ ಇವರ ಆತ್ಮಹತ್ಯೆ ಮಾಡಿಕೊಂಡಿದ್ದು ನಮಗೆ ಬೇಸರವಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸರ ತನಿಖೆ ಬಳಿಕವೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ.
Shivamogga mother commits suicide along with her two children. The deceased mother were having some family issues. Incident came to light in Hosanagara.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm