ಬ್ರೇಕಿಂಗ್ ನ್ಯೂಸ್
09-08-24 03:36 pm HK News Desk ಕರ್ನಾಟಕ
ಶಿವಮೊಗ್ಗ, ಆ.09: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಮತ್ತಿಕೈ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಂಪಕಾಪುರ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ.
ಚಂಪಕಾಪುರ ಗ್ರಾಮದ ನಿವಾಸಿ ರಾಜೇಶ್ ಎಂಬವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ (12) ಹಾಗೂ ಸಂಪದ (6) ಮೃತ ದುರ್ದೈವಿಗಳು. ಕೌಟಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಬಾವಿಗೆ ಬಿದ್ದಿದ್ದ ಮೂವರನ್ನೂ ಗ್ರಾಮಸ್ಥರು ರಕ್ಷಿಸಲು ಪ್ರಯತ್ನಿಸಿದರು. ಆದರೆ, ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಬಾವಿಯಿಂದ ಹೊರ ತೆಗೆಯುವಷ್ಟರಲ್ಲಿ ಮೂವರೂ ಮೃತರಾಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ವಾಣಿ ಪತಿ ರಾಜೇಶ್ ಮತ್ತಿಕೈ ಗ್ರಾಮದಲ್ಲಿ ಟಿವಿ ರಿಪೇರಿ ಕೆಲಸ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಹೊಸನಗರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ತಾಯಿ, ಮಕ್ಕಳಿಬ್ಬರ ಸಾವಿನ ಕುರಿತು ಮಾತನಾಡಿರುವ ಸ್ಥಳೀಯರಾದ ಸುಬ್ರಮಣ್ಯ ಅವರು, ಚಂಪಕಪುರದ ರಾಜೇಶ್ ಅವರ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ನಮಗೆ ಅಚ್ಚರಿ ತಂದಿದೆ. ರಾಜೇಶ್ ಟಿವಿ ರಿಪೇರಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾನೆ. ಆತ ಒಳ್ಳೆಯ ವ್ಯಕ್ತಿಯಾಗಿದ್ದಾನೆ. ಆದರೆ ಇವರ ಆತ್ಮಹತ್ಯೆ ಮಾಡಿಕೊಂಡಿದ್ದು ನಮಗೆ ಬೇಸರವಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸರ ತನಿಖೆ ಬಳಿಕವೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ.
Shivamogga mother commits suicide along with her two children. The deceased mother were having some family issues. Incident came to light in Hosanagara.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
21-06-25 08:50 pm
HK News Desk
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm