ಬ್ರೇಕಿಂಗ್ ನ್ಯೂಸ್
14-08-24 06:08 pm HK News Desk ಕರ್ನಾಟಕ
ಬೆಳಗಾವಿ, ಆಗಸ್ಟ್.14: ಕಾಂಗ್ರೆಸ್ ಸರ್ಕಾರದಿಂದ ನೀಡಲಾಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮಾತ್ರ ಯೋಜನೆ ನೀಡಿ. ಶ್ರೀಮಂತರನ್ನು ಯೋಜನೆಯಿಂದ ಹೊರಗಿಡಬೇಕು. ಇದರಿಂದ ವಾರ್ಷಿಕವಾಗಿ ರೂ. 10,000 ಕೋಟಿ ಉಳಿತಾಯವಾಗಲಿದೆ ಎಂದು ಜಾರಕಿಹೊಳಿ ಹೇಳಿದ್ದಾರೆ.
ಈ ವರ್ಷದ ಆರಂಭದಲ್ಲಿ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2024-25ನೇ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕಾಗಿ ರೂ. 52,000 ಕೋಟಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಪಕ್ಷದ ವರಿಷ್ಠರನ್ನು ಭೇಟಿ ಮಾಡಿದಾಗ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ನಾನೇನು ಹೇಳಿಲ್ಲ. ಈ ಗ್ಯಾರಂಟಿ ಯೋಜನೆಗಳು ಬಡವರಿಗೆ ತಲುಪಬೇಕು, ಶ್ರೀಮಂತರಿಗೆ ಬೇಡ ಎಂದು ಜನ ಹೇಳುತ್ತಿದ್ದಾರೆ. ಹೋಟೆಲ್ ಗಳಲ್ಲಿ, ಕೆಲಸಗಾರರು ಸೇರಿದಂತೆ ಎಲ್ಲೆಡೆಯೂ ಇದೇ ಚರ್ಚೆಯಾಗುತ್ತಿದೆ. ಶ್ರೀಮಂತರಿಗೆ ಯಾಕೆ ನೀಡುತ್ತಿದ್ದೀರಿ? ಬಡವರಿಗೆ ನೀಡಿ ಎಂದು ಪ್ರತಿಪಕ್ಷಗಳು ಕೂಡಾ ಕೇಳಿವೆ ಎಂದರು.
ಯೋಜನೆಗಳ ಪರಿಷ್ಕರಣೆಯಿಂದ ಸರ್ಕಾರದಿಂದ ಜನಪ್ರಿಯತೆ ಹೆಚ್ಚಲಿದೆ. ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲು ಯಾರು ಹೇಳಿದ್ದು? ಅದನ್ನು ನಾವು ಸ್ಥಗಿತಗೊಳಿಸುವುದಿಲ್ಲ. ಇದರ ಬಗ್ಗೆ ಕ್ಯಾಬಿನೆಟ್ ಹಾಗೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆದಿಲ್ಲ. ಇದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದರು.
Karnataka Minister Satish Jarkiholi on Wednesday said the guarantee schemes need to be reviewed so that only the economically weaker sections, and not the rich, benefit from them, sparking a debate on the ambitious programmes launched by the Congress government.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm