ಬ್ರೇಕಿಂಗ್ ನ್ಯೂಸ್
14-08-24 06:08 pm HK News Desk ಕರ್ನಾಟಕ
ಬೆಳಗಾವಿ, ಆಗಸ್ಟ್.14: ಕಾಂಗ್ರೆಸ್ ಸರ್ಕಾರದಿಂದ ನೀಡಲಾಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮಾತ್ರ ಯೋಜನೆ ನೀಡಿ. ಶ್ರೀಮಂತರನ್ನು ಯೋಜನೆಯಿಂದ ಹೊರಗಿಡಬೇಕು. ಇದರಿಂದ ವಾರ್ಷಿಕವಾಗಿ ರೂ. 10,000 ಕೋಟಿ ಉಳಿತಾಯವಾಗಲಿದೆ ಎಂದು ಜಾರಕಿಹೊಳಿ ಹೇಳಿದ್ದಾರೆ.
ಈ ವರ್ಷದ ಆರಂಭದಲ್ಲಿ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2024-25ನೇ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕಾಗಿ ರೂ. 52,000 ಕೋಟಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಪಕ್ಷದ ವರಿಷ್ಠರನ್ನು ಭೇಟಿ ಮಾಡಿದಾಗ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ನಾನೇನು ಹೇಳಿಲ್ಲ. ಈ ಗ್ಯಾರಂಟಿ ಯೋಜನೆಗಳು ಬಡವರಿಗೆ ತಲುಪಬೇಕು, ಶ್ರೀಮಂತರಿಗೆ ಬೇಡ ಎಂದು ಜನ ಹೇಳುತ್ತಿದ್ದಾರೆ. ಹೋಟೆಲ್ ಗಳಲ್ಲಿ, ಕೆಲಸಗಾರರು ಸೇರಿದಂತೆ ಎಲ್ಲೆಡೆಯೂ ಇದೇ ಚರ್ಚೆಯಾಗುತ್ತಿದೆ. ಶ್ರೀಮಂತರಿಗೆ ಯಾಕೆ ನೀಡುತ್ತಿದ್ದೀರಿ? ಬಡವರಿಗೆ ನೀಡಿ ಎಂದು ಪ್ರತಿಪಕ್ಷಗಳು ಕೂಡಾ ಕೇಳಿವೆ ಎಂದರು.
ಯೋಜನೆಗಳ ಪರಿಷ್ಕರಣೆಯಿಂದ ಸರ್ಕಾರದಿಂದ ಜನಪ್ರಿಯತೆ ಹೆಚ್ಚಲಿದೆ. ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲು ಯಾರು ಹೇಳಿದ್ದು? ಅದನ್ನು ನಾವು ಸ್ಥಗಿತಗೊಳಿಸುವುದಿಲ್ಲ. ಇದರ ಬಗ್ಗೆ ಕ್ಯಾಬಿನೆಟ್ ಹಾಗೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆದಿಲ್ಲ. ಇದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದರು.
Karnataka Minister Satish Jarkiholi on Wednesday said the guarantee schemes need to be reviewed so that only the economically weaker sections, and not the rich, benefit from them, sparking a debate on the ambitious programmes launched by the Congress government.
03-03-26 08:37 pm
HK News Staffer
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm