ಬ್ರೇಕಿಂಗ್ ನ್ಯೂಸ್
14-08-24 06:08 pm HK News Desk ಕರ್ನಾಟಕ
ಬೆಳಗಾವಿ, ಆಗಸ್ಟ್.14: ಕಾಂಗ್ರೆಸ್ ಸರ್ಕಾರದಿಂದ ನೀಡಲಾಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮಾತ್ರ ಯೋಜನೆ ನೀಡಿ. ಶ್ರೀಮಂತರನ್ನು ಯೋಜನೆಯಿಂದ ಹೊರಗಿಡಬೇಕು. ಇದರಿಂದ ವಾರ್ಷಿಕವಾಗಿ ರೂ. 10,000 ಕೋಟಿ ಉಳಿತಾಯವಾಗಲಿದೆ ಎಂದು ಜಾರಕಿಹೊಳಿ ಹೇಳಿದ್ದಾರೆ.
ಈ ವರ್ಷದ ಆರಂಭದಲ್ಲಿ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2024-25ನೇ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕಾಗಿ ರೂ. 52,000 ಕೋಟಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಪಕ್ಷದ ವರಿಷ್ಠರನ್ನು ಭೇಟಿ ಮಾಡಿದಾಗ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ನಾನೇನು ಹೇಳಿಲ್ಲ. ಈ ಗ್ಯಾರಂಟಿ ಯೋಜನೆಗಳು ಬಡವರಿಗೆ ತಲುಪಬೇಕು, ಶ್ರೀಮಂತರಿಗೆ ಬೇಡ ಎಂದು ಜನ ಹೇಳುತ್ತಿದ್ದಾರೆ. ಹೋಟೆಲ್ ಗಳಲ್ಲಿ, ಕೆಲಸಗಾರರು ಸೇರಿದಂತೆ ಎಲ್ಲೆಡೆಯೂ ಇದೇ ಚರ್ಚೆಯಾಗುತ್ತಿದೆ. ಶ್ರೀಮಂತರಿಗೆ ಯಾಕೆ ನೀಡುತ್ತಿದ್ದೀರಿ? ಬಡವರಿಗೆ ನೀಡಿ ಎಂದು ಪ್ರತಿಪಕ್ಷಗಳು ಕೂಡಾ ಕೇಳಿವೆ ಎಂದರು.
ಯೋಜನೆಗಳ ಪರಿಷ್ಕರಣೆಯಿಂದ ಸರ್ಕಾರದಿಂದ ಜನಪ್ರಿಯತೆ ಹೆಚ್ಚಲಿದೆ. ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲು ಯಾರು ಹೇಳಿದ್ದು? ಅದನ್ನು ನಾವು ಸ್ಥಗಿತಗೊಳಿಸುವುದಿಲ್ಲ. ಇದರ ಬಗ್ಗೆ ಕ್ಯಾಬಿನೆಟ್ ಹಾಗೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆದಿಲ್ಲ. ಇದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದರು.
Karnataka Minister Satish Jarkiholi on Wednesday said the guarantee schemes need to be reviewed so that only the economically weaker sections, and not the rich, benefit from them, sparking a debate on the ambitious programmes launched by the Congress government.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm