ಬ್ರೇಕಿಂಗ್ ನ್ಯೂಸ್
17-08-24 12:05 pm HK News Desk ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದ್ದಂತೆ ಇತ್ತ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ.
ಸದ್ಯ ಸಿಎಂ ಅಧಿಕೃತ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರು ಮತ್ತು ವಕೀಲರು, ಹಿರಿಯ ಅಧಿಕಾರಿಗಳ ಜೊತೆಗೆ ಕಾನೂನು ಆಯ್ಕೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ಮೆಟ್ಟಿಲನ್ನೂ ಏರುವ ಸಾಧ್ಯತೆಯಿದೆ. ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಕುರಿತಾಗಿ ಈಗಾಗಲೇ ಸಿಎಂ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಬಗ್ಗೆ ಹಾಗೂ ಮುಂದೆ ಕೈಗೊಳ್ಳಬೇಕಾದ ನಡೆಗಳ ಬಗ್ಗೆ ಕಾನೂನು ಸಲಹೆಗಾರ ಬಿ ಪೊನ್ನಣ್ಣ ಅವರ ಜೊತೆ ಕೂಡ ಸಮಾಲೋಚಿಸುತ್ತಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರವಾಗಿ ರಾಜ್ಯಪಾಲರಿಂದ ಮುಖ್ಯ ಕಾರ್ಯದರ್ಶಿ ಶಾಲಿನ್ ರಜನೀಶ್, ಎಸಿಎಸ್ ಅತೀಕ್ಗೆ ನೋಟಿಸ್ ನೀಡಲಾಗಿದೆ. ರಾಜಭವನದಿಂದ ನೋಟಿಸ್ ರವಾನೆಯಾಗಿದೆ. ಮುಡಾ ಪ್ರಕರಣದ ಮೂವರು ದೂರುದಾರರಾದ ಟಿಜೆ ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ಗೆ ನೋಟಿಸ್ ಜಾರಿ ಮಾಡಲಾಗಿದೆ. ಮುಡಾ ನಿವೇಶನ ವಿವಾದ ಕುರಿತು ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನಲೆ ತುರ್ತು ಸಂಪುಟ ಸಭೆಯನ್ನು ಸಂಜೆ 5 ಗಂಟೆಗೆ ಕರೆಯಲಾಗಿದೆ. ರಾಜೀನಾಮೆ ಬದಲು ನ್ಯಾಯಾಲಯದಲ್ಲಿ ಕಾನೂನು ಹೋರಾಟಕ್ಕೆ ನಿರ್ಧಾರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
Karnataka Governor Thaawarchand Gehlot has granted permission to prosecute CM Siddaramaiah in MUDA scam, news agency PTI reported quoting sources. "The Governor has granted sanction for prosecution against the Chief Minister. It is based on three petitions filed by T J Abraham, one Pradeep and Snehamayi Krishna," an official at the Raj Bhavan told PTI.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm