ಬ್ರೇಕಿಂಗ್ ನ್ಯೂಸ್
17-08-24 09:36 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.17: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ ನಲ್ಲಿ ಕೇವಿಯಟ್ ಅರ್ಜಿ ದಾಖಲಾಗಿದೆ. ಹೈಕೋರ್ಟ್ ವಕೀಲ ಎಸ್.ಪಿ.ಪ್ರದೀಪ್ ಕುಮಾರ್ ಕೇವಿಯಟ್ ಅರ್ಜಿ ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯಪಾಲರು ನೀಡಿರುವ ತನಿಖೆಯ ಅನುಮತಿಯನ್ನು ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದರೆ ಆಗ ನಮ್ಮ ವಾದ ಆಲಿಸದೆ ಯಾವುದೇ ಆದೇಶ ಮಾಡಬಾರದು ಎಂದು ಅರ್ಜಿಯಲ್ಲಿ ಕೋರಿದ್ದಾರೆ.
ಮುಡಾ ಹಗರಣವನ್ನು ತನಿಖೆಗೆ ಒಳಪಡಿಸಲು ಆದೇಶಿಸಬೇಕು ಎಂದು ಕೋರಿ ಎಸ್.ಪಿ.ಪ್ರದೀಪ್ ಕುಮಾರ್ ಈಗಾಗಲೇ "ಜನಪ್ರತಿನಿಧಿಗಳ ವಿಶೇಷ ಕೋರ್ಟ್" ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಮುಡಾದಲ್ಲಿ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂಬ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ಧರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದರು.

ಕೇವಿಯಟ್ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅರ್ಜಿದಾರ ಪ್ರದೀಪ್ ಕುಮಾರ್, ‘ಕಾನೂನು ಪ್ರಕಾರ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೊರೆ ಹೋಗಬಹುದು, ಕೇವಿಯಟ್ ಇಲ್ಲದೇ ಹೋದರೆ ಅವರಿಗೆ ರಿಲೀಫ್ ಸಿಗಬಹುದು. ಹೀಗಾಗಿ, ನಾನು ಕೇವಿಯಟ್ ಸಲ್ಲಿಸಿದ್ದೇನೆ ಎಂದಿದ್ದಾರೆ.
ಕರ್ನಾಟಕ ಸರ್ಕಾರ ಅಥವಾ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಮಂಜೂರಾತಿಗೆ ಸಂಬಂಧಿಸಿದಂತೆ ಯಾವುದೇ ಕಾನೂನು ಕ್ರಮಗಳನ್ನು ಇನ್ನೂ ಕೈಗೊಂಡಿಲ್ಲ. ಅಂತೆಯೇ ಪ್ರಕರಣದ ಮತ್ತೊಬ್ಬ ದೂರುದಾರ ಟಿಜೆ ಅಬ್ರಹಾಂ ಅವರು ಕೂಡ ಸೋಮವಾರ ಕೇವಿಯಟ್ ಸಲ್ಲಿಸುವುದಾಗಿ ಹೇಳಿದ್ದಾರೆ. ಯಾವುದೇ ಪ್ರಕರಣದಲ್ಲಿ ಅರ್ಜಿಗೆ ಮೊದಲೇ ನಿಗದಿತ ವಿಚಾರದಲ್ಲಿ ಕೇವಿಯಟ್ ಸಲ್ಲಿಸಿದ್ದರೆ, ಕೋರ್ಟ್ ತುರ್ತು ತೀರ್ಪು ನೀಡುವುದಕ್ಕೆ ಕಷ್ಟವಾಗುತ್ತದೆ.
One of the complainants in the MUDA 'scam' case on Saturday filed a caveat in the Karnataka High Court after Governor Thaawarchand Gehlot granted permission to prosecute Chief Minister Siddaramaiah.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm