ಬ್ರೇಕಿಂಗ್ ನ್ಯೂಸ್
21-08-24 11:39 am HK News Desk ಕರ್ನಾಟಕ
ಮಂಡ್ಯ, ಆ 21: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.
ನೆನ್ನೆ ರಾತ್ರಿ ಗಂಡ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.
ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.
Mandya 21 year old house wife suspicious death, husband jumps to lake after family troubles. The deceased have been identified as Swathi and Mohan. Their one year old girl baby is now said to be orphan.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 11:13 am
HK News Staffer
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am