ಬ್ರೇಕಿಂಗ್ ನ್ಯೂಸ್
21-08-24 11:39 am HK News Desk ಕರ್ನಾಟಕ
ಮಂಡ್ಯ, ಆ 21: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.
ನೆನ್ನೆ ರಾತ್ರಿ ಗಂಡ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.
ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.
Mandya 21 year old house wife suspicious death, husband jumps to lake after family troubles. The deceased have been identified as Swathi and Mohan. Their one year old girl baby is now said to be orphan.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm