ಬ್ರೇಕಿಂಗ್ ನ್ಯೂಸ್
28-08-24 11:07 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 28: ಸೀಬರ್ಡ್ ನೌಕಾನೆಲೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಿ ಏಜಂಟರಿಗೆ ರವಾನಿಸುತ್ತಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ಕಾರವಾರದಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ತೋಡೂರಿನ ಸುನೀಲ್ ನಾಯ್ಕ, ಮುದಗಾದ ವೇತನ್ ತಾಂಡೇಲ್, ಅಂಕೋಲಾ ಹಳವಳ್ಳಿಯ ಅಕ್ಷಯ ನಾಯ್ಕ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.
ಹಣಕ್ಕಾಗಿ ಕದಂಬ ನೌಕಾನೆಲೆಯ ಫೋಟೋ, ಇತರೆ ಮಾಹಿತಿಗಳನ್ನು ಪಾಕಿಸ್ತಾನದ ಐಎಸ್ಐ ಏಜಂಟರಿಗೆ ರವಾನಿಸುತ್ತಿದ್ದ ಆರೋಪ ಇವರ ಮೇಲಿದೆ. ಆರೋಪಿಗಳು ಈ ಹಿಂದೆ ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಎನ್ಐಎ ಡಿವೈಎಸ್ಪಿ ನೇತೃತ್ವದಲ್ಲಿ ಮೂವರು ಇನ್ಸಪೆಕ್ಟರ್, ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದ ಆರೋಪದಲ್ಲಿ 2023ರಲ್ಲಿ ಹೈದರಾಬಾದ್ನಲ್ಲಿ ದೀಪಕ್ ಎಂಬಾತನನ್ನು ಎನ್ಐಎ ಅರೆಸ್ಟ್ ಮಾಡಿದ್ದು ಆ ಸಂದರ್ಭದಲ್ಲಿ ವಿದೇಶಿ ನೆಟ್ವರ್ಕ್ ಪತ್ತೆಯಾಗಿತ್ತು. ದೇಶದ ಒಳಗಿನ ರಹಸ್ಯಗಳನ್ನು ಹಣಕ್ಕಾಗಿ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಯೂ ಸಿಕ್ಕಿತ್ತು. ದೀಪಕ್ ಹಾಗೂ ಇತರರ ತನಿಖೆ ವೇಳೆ ಕಾರವಾರದ ಮೂವರ ಹೆಸರು ತಿಳಿದುಬಂದಿತ್ತು. ಸೀಬರ್ಡ್ ನೌಕಾನೆಲೆಯ ಫೋಟೋ, ಮಾಹಿತಿ ರವಾನಿಸಿ ಕಾರ್ಮಿಕರು ಹಣ ಪಡೆದಿದ್ದರು. ಆಬಳಿಕ ಅಂಕೋಲಾದ ಅಕ್ಷಯ ನಾಯ್ಕ ನೌಕಾನೆಲೆ ತೊರೆದು ಗೋವಾದಲ್ಲಿ ಹೊಟೇಲ್ ಕೆಲಸಕ್ಕೆ ಸೇರಿದ್ದ. ಇದೀಗ ರಹಸ್ಯ ಕಾರ್ಯಾಚರಣೆಯಲ್ಲಿ ಮೂವರನ್ನು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದ್ದಾರೆ. ಮೊಬೈಲ್ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.
ಆರೋಪಿಗಳು ಹನಿಟ್ರಾಪ್ ಬಲೆಗೆ ಬಿದ್ದು ವಿದೇಶಿ ನೆಟ್ವರ್ಕ್ ಜೊತೆಗೆ ಶಾಮೀಲಾಗಿದ್ದರೆ, ಕೇವಲ ಹಣಕ್ಕಾಗಿ ಈ ಕೃತ್ಯ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
Seabird Shipyard Secret Leak, NIA operation in Karwar, three arrested for info to Pakistani agents.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 07:58 pm
HK News Staffer
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm