ಬ್ರೇಕಿಂಗ್ ನ್ಯೂಸ್
28-08-24 11:07 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 28: ಸೀಬರ್ಡ್ ನೌಕಾನೆಲೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಿ ಏಜಂಟರಿಗೆ ರವಾನಿಸುತ್ತಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ಕಾರವಾರದಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ತೋಡೂರಿನ ಸುನೀಲ್ ನಾಯ್ಕ, ಮುದಗಾದ ವೇತನ್ ತಾಂಡೇಲ್, ಅಂಕೋಲಾ ಹಳವಳ್ಳಿಯ ಅಕ್ಷಯ ನಾಯ್ಕ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.
ಹಣಕ್ಕಾಗಿ ಕದಂಬ ನೌಕಾನೆಲೆಯ ಫೋಟೋ, ಇತರೆ ಮಾಹಿತಿಗಳನ್ನು ಪಾಕಿಸ್ತಾನದ ಐಎಸ್ಐ ಏಜಂಟರಿಗೆ ರವಾನಿಸುತ್ತಿದ್ದ ಆರೋಪ ಇವರ ಮೇಲಿದೆ. ಆರೋಪಿಗಳು ಈ ಹಿಂದೆ ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಎನ್ಐಎ ಡಿವೈಎಸ್ಪಿ ನೇತೃತ್ವದಲ್ಲಿ ಮೂವರು ಇನ್ಸಪೆಕ್ಟರ್, ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದ ಆರೋಪದಲ್ಲಿ 2023ರಲ್ಲಿ ಹೈದರಾಬಾದ್ನಲ್ಲಿ ದೀಪಕ್ ಎಂಬಾತನನ್ನು ಎನ್ಐಎ ಅರೆಸ್ಟ್ ಮಾಡಿದ್ದು ಆ ಸಂದರ್ಭದಲ್ಲಿ ವಿದೇಶಿ ನೆಟ್ವರ್ಕ್ ಪತ್ತೆಯಾಗಿತ್ತು. ದೇಶದ ಒಳಗಿನ ರಹಸ್ಯಗಳನ್ನು ಹಣಕ್ಕಾಗಿ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಯೂ ಸಿಕ್ಕಿತ್ತು. ದೀಪಕ್ ಹಾಗೂ ಇತರರ ತನಿಖೆ ವೇಳೆ ಕಾರವಾರದ ಮೂವರ ಹೆಸರು ತಿಳಿದುಬಂದಿತ್ತು. ಸೀಬರ್ಡ್ ನೌಕಾನೆಲೆಯ ಫೋಟೋ, ಮಾಹಿತಿ ರವಾನಿಸಿ ಕಾರ್ಮಿಕರು ಹಣ ಪಡೆದಿದ್ದರು. ಆಬಳಿಕ ಅಂಕೋಲಾದ ಅಕ್ಷಯ ನಾಯ್ಕ ನೌಕಾನೆಲೆ ತೊರೆದು ಗೋವಾದಲ್ಲಿ ಹೊಟೇಲ್ ಕೆಲಸಕ್ಕೆ ಸೇರಿದ್ದ. ಇದೀಗ ರಹಸ್ಯ ಕಾರ್ಯಾಚರಣೆಯಲ್ಲಿ ಮೂವರನ್ನು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದ್ದಾರೆ. ಮೊಬೈಲ್ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.
ಆರೋಪಿಗಳು ಹನಿಟ್ರಾಪ್ ಬಲೆಗೆ ಬಿದ್ದು ವಿದೇಶಿ ನೆಟ್ವರ್ಕ್ ಜೊತೆಗೆ ಶಾಮೀಲಾಗಿದ್ದರೆ, ಕೇವಲ ಹಣಕ್ಕಾಗಿ ಈ ಕೃತ್ಯ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
Seabird Shipyard Secret Leak, NIA operation in Karwar, three arrested for info to Pakistani agents.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm