ಬ್ರೇಕಿಂಗ್ ನ್ಯೂಸ್
30-08-24 11:24 am HK News Desk ಕರ್ನಾಟಕ
ಕಾರವಾರ, ಆ 30: ಕೈದಿಗಳಿಬ್ಬರು ರಂಪಾಟ ಮಾಡಿ, ತಲೆ ಒಡೆದುಕೊಂಡಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಜೈಲಿನೊಳಗೆ ಬಹಳಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ, ಸೂಕ್ತ ಸೌಲಭ್ಯವಿಲ್ಲ ಹಾಗೂ ಹೊರಗಿನಿಂದ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬಿಡುತ್ತಿಲ್ಲ. ತಮಗೆ ತಂಬಾಕು ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಅಧಿಕಾರಿಗಳ ಜೊತೆ ರಗಳೆ ತೆಗೆದಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲಿ ಗಲಾಟೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ, ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ನೀಡಿದ್ದರು. ಅಲ್ಲದೇ ಜೈಲಿನ ಒಳಗೆ ಹೋಗಿ ಕೈದಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು. ಗಲಾಟೆ ಮಾಡಿ ಗಾಯಗೊಂಡವರು ದಾಂಡೇಲಿಯ ಮುಜಾಮಿಲ್ ಹಾಗೂ ಕುಮಟಾದ ಫರಾನ್ ಛಬ್ಬಿ ಎನ್ನುವರಾಗಿದ್ದಾರೆ. ಕಲ್ಲಿನಿಂದ ಹೊಡೆದುಕೊಂಡು ಗಾಯ ಮಾಡಿಕೊಂಡಿದ್ದ ಇಬ್ಬರ ತಲೆಗೆ ಬಟ್ಟೆ ಸುತ್ತಿ, ಕಾರವಾರದ ಕ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕೈದಿಗಳನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ, ತಮಗೆ ಜೈಲು ಅಧಿಕಾರಿಗಳು ಮನಬಂದಂತೆ ಥಳಿಸಿದ್ದಾರೆ. ಈ ಗಲಾಟೆಗೆ ಜೈಲು ಅಧಿಕಾರಿಗಳೇ ಕಾರಣ ಎಂದು ಆರೋಪ ಮಾಡುತ್ತ ತೆರಳಿದರು. ಆದರೆ, ಈ ಬಗ್ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ಕೈದಿಗಳ ಆರೋಪವು ಸುಳ್ಳು ಎಂದು ತಳ್ಳಿಹಾಕಿದ್ದಾರೆ.
''ಕೈದಿಗಳು ಗಲಾಟೆ ಮಾಡಿಕೊಳ್ಳುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜೈಲಿಗೆ ತೆರಳಿ ಪರಿಶೀಲಿಸಲಾಗಿದೆ. ಜೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದರಿಂದ ಮತ್ತು ಸರಿಯಾಗಿ ಊಟ ನೀಡುವಂತೆ ಗಲಾಟೆ ನಡೆಸಿದ್ದರು. ಆರಂಭದಲ್ಲಿ ಗಲಾಟೆ ಬಗ್ಗೆ ಕೇಳಿದಾಗ ಜೈಲಾಧಿಕಾರಿಗಳು ಹಲ್ಲೆ ಮಾಡಿರುವುದಾಗಿ ನಮಗೂ ದೂರಿದ್ದರು. ಬಳಿಕ ಜೈಲಿನಲ್ಲಿ ಪರಿಶೀಲನೆ ನಡೆಸಿ, ಕೈದಿಗಳು ಹಾಗೂ ಜೈಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಇಬ್ಬರೂ ಕಲ್ಲಿನಿಂದ ಮೂರ್ನಾಲ್ಕು ಬಾರಿ ಹೊಡೆದುಕೊಂಡಿರುವುದು ಖಚಿತವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ'' ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ತಿಳಿಸಿದ್ದಾರೆ.
Karwar jail inmates break head and fight, two hospitalized
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm