ಬ್ರೇಕಿಂಗ್ ನ್ಯೂಸ್
30-08-24 10:03 pm HK News Desk ಕರ್ನಾಟಕ
ಬೆಳಗಾವಿ, ಆ 30: ಒಮಾನ್ ದೇಶದಲ್ಲಿ ಈಚೆಗೆ ಸಂಭವಿಸಿದ ಕಾರು ಅಪಘಾತದಲ್ಲಿ ಗೋಕಾಕ ಮೂಲದ ನಾಲ್ವರು ಸಜೀವ ದಹನವಾಗಿದ್ದಾರೆ.
ಗೋಕಾಕ್ನ ವಿಜಯಾ ಮಾಯಪ್ಪ ತಹಶೀಲ್ದಾರ (58), ಪುತ್ರ ಪವನ್ ಕುಮಾರ್ (33), ಪುತ್ರಿ ಪೂಜಾ (30) ಮತ್ತು ಅಳಿಯ ರಾಯಚೂರಿನ ದೇವದುರ್ಗದ ಆದಿಶೇಷ ಬಸವರಾಜ (36) ಮೃತ ದುರ್ದೈವಿಗಳು.
ಒಮಾನಿನ ಸಲಾಲಾ ನಗರದಿಂದ ಮುಸ್ಕತ್ಗೆ ತೆರಳುತ್ತಿದ್ದ ವೇಳೆ ಹೈಮಾ ಪ್ರದೇಶದ ಹತ್ತಿರ ಕಾರ್ ಅಪಘಾತಕ್ಕೀಡಾಯಿತು. ಮೊದಲು ಇವರೆಲ್ಲ ಕೇರಳದವರು ಎಂಬ ತಪ್ಪು ಮಾಹಿತಿ ರವಾನೆಯಾಗಿತ್ತು. ನಾಲ್ವರೂ ಗೋಕಾಕ ಮೂಲದವರು ಎಂದು ಭಾರತೀಯ ರಾಯಭಾರ ಕಚೇರಿ ಮೂಲಗಳು ಖಚಿತಪಡಿಸಿವೆ ಎಂದು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಶವಗಳನ್ನು ಹೈಮಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತದೇಹಗಳನ್ನು ಭಾರತಕ್ಕೆ ತರಲು ಈಗಾಗಲೇ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಭಾರತೀಯ ರಾಯಭಾರ ಕಚೇರಿಯಿಂದ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡಲು ಮನವಿ ಮಾಡಲಾಗಿದೆ' ಎಂದರು.
ನಾಲ್ವರು ಕಾರಿನಲ್ಲಿ ಸಲಾಲಾ ನಗರದಿಂದ ಮಸ್ಕತ್ಗೆ ತೆರಳುತ್ತಿದ್ದರು. ಮಧ್ಯದಲ್ಲಿ ಪೆಟ್ರೋಲ್ ಖಾಲಿಯಾಗಿದ್ದರಿಂದ ರಸ್ತೆ ಬದಿ ಕಾರ್ ನಿಲ್ಲಿಸಿದ್ದರು. ಆಗ ಸ್ಥಳಕ್ಕೆ ಬಂದ ಪೊಲೀಸರು ಇವರ ಸಂಪೂರ್ಣ ಮಾಹಿತಿ ಕಲೆಹಾಕಿದರು. ಪೊಲೀಸರು ಪೆಟ್ರೋಲ್ ತರಿಸಿಕೊಟ್ಟ ಬಳಿಕ ಮತ್ತೆ ಕಾರು ಹತ್ತಿಕೊಂಡು ನಾಲ್ವರೂ ಹೊರಟಿದ್ದರು. ಈ ವೇಳೆ 15 ಕಿ.ಮೀ ಮುಂದೆ ಹೋಗುತ್ತಿದ್ದಂತೆ ಕಾರಿನ ಮುಂದೆ ಹೋಗುತ್ತಿದ್ದ ತೈಲ ಸಾಗಣೆಯ ಟ್ಯಾಂಕರ್ ಗೆ ಬೆಂಕಿ ತಾಗಿ ಅದು ಸ್ಫೋಟಗೊಂಡಿದೆ. ಬಳಿಕ ಇವರ ಕಾರಿನ ಮೇಲೆಯೂ ತೈಲ ಚೆಲ್ಲಿದ್ದರಿಂದ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾಯಿತು. ಮೃತರ ವಿವರವನ್ನು ಸ್ಥಳೀಯ ಪೊಲೀಸರು ಕಲೆ ಹಾಕಿದ್ದಾರೆ.
Four members of a family with origins in Gokak were killed in a road accident in the Sultanate of Oman recently. The deceased have been identified as Pavankumar Mayappa Tahsildar, Vijaya Mayappa Tahsildar, Pooja Mayappa Tahsildar and Adishesh Basavaraj. The accident occurred when they were travelling from Salalah in Oman to Muscat.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm