ಬ್ರೇಕಿಂಗ್ ನ್ಯೂಸ್
02-09-24 02:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಬಂದಿರುವ ದೂರಿನ ಬಗ್ಗೆ ದಾಖಲೆ ಸಹಿತ ವಿವರವಾದ ಮಾಹಿತಿ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದ್ದಾರೆ.
ಖರ್ಗೆ ಒಡೆತನದ ಸಿದ್ಧವಿಹಾರ ಟ್ರಸ್ಟ್ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಸಿಎ ನಿವೇಶನ ನೀಡಿದ ಪ್ರಕರಣದ ವಿವರ ಕೊಡಿ ಎಂದು ಆದೇಶಿಸಿದ್ದಾರೆ. ಈ ಮೂಲಕ ರಾಜ್ಯಪಾಲರು ಮತ್ತೊಂದು ದಾಳ ಉರುಳಿಸಿದ್ದಾರೆ.
ಇತ್ತೀಚೆಗಷ್ಟೇ ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದರು. ನಾರಾಯಣಸ್ವಾಮಿ ದೂರಿನ ಹಿನ್ನೆಲೆಯಲ್ಲಿ ಸರ್ಕಾರದಿಂದ ಹೆಚ್ಚಿನ ವಿವರಣೆ ನೀಡುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಬೆಂಗಳೂರಿನ ಏರೋಸ್ಪೇಸ್ ಪಾರ್ಕ್ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿಯಿಂದ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧವಿಹಾರ ಟ್ರಸ್ಟ್ಗೆ ಮಂಜೂರು ಮಾಡಲಾಗಿದೆ. ಮಾರ್ಚ್ 4 ರಂದು ಅರ್ಜಿಗಳ ಪರಿಶೀಲನೆ ನಡೆದಿದ್ದು, ಮಾರ್ಚ್ 5 ರಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನಿರ್ಣಯ ಕೈಗೊಂಡು ಮಾರ್ಚ್ 6 ರಿಂದ ಹಂಚಿಕೆ ಪತ್ರಗಳನ್ನು ನೀಡಲಾಗಿದೆ. ಇಷ್ಟೊಂದು ಅವಸರದಲ್ಲಿ ಹಂಚಿಕೆ ಮಾಡಿದ್ದು ಯಾಕೆ ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದರು.
ಟ್ರಸ್ಟ್ಗೆ ನೀಡಲಾಗಿರುವ ನಿವೇಶನ ಹಂಚಿಕೆಯಲ್ಲಿ ಹಲವಾರು ಲೋಪಗಳಾಗಿವೆ. ಅಕ್ರಮದಿಂದಾಗಿ ಸರ್ಕಾರಕ್ಕೆ ಸುಮಾರು ರೂ. 1,000 ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದರು. ಅರ್ಜಿ ಸಲ್ಲಿಸಲು ಕೇವಲ 14 ದಿನಗಳ ಕಾಲಾವಕಾಶ ನೀಡಿ ತರಾತುರಿಯಲ್ಲಿ ಪ್ರಕ್ರಿಯೆ ಮುಗಿಸಿರುವುದರಿಂದ ಸಿಎ ನಿವೇಶನಗಳ ಹಂಚಿಕೆಗೆ ಅಧಿಸೂಚನೆ ಹೊರಡಿಸಿರುವ ಬಗ್ಗೆಯೂ ಸಾರ್ವಜನಿಕರಿಗೆ ತಿಳಿಯದಂತಾಗಿದೆ. ಇದು ಕೆಐಎಡಿಬಿ ಇತಿಹಾಸದಲ್ಲಿ ನಡೆದಿರುವ ಅತಿದೊಡ್ಡ ಲೋಪ ಎಂದು ಆರೋಪಿಸಿದ್ದಾರೆ.
Karnataka Governor Thaawarchand Gehlot has asked Chief Secretary Shalini Rajneesh to submit a detailed report on the complaint filed against the family of Mallikarjun Kharge.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm