ಬ್ರೇಕಿಂಗ್ ನ್ಯೂಸ್
09-12-20 05:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಭಾರತ್ ಬಂದ್, ಕರ್ನಾಟಕ ಬಂದ್ ಮುಗೀತು. ಈಗ ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಕಳೆದ ಎರಡು ದಿನಗಳ ಬಂದ್ ನಿಂದಾಗಿ ಸಾರಿಗೆ ಬಸ್ಸುಗಳ ಬಿಸಿ ಜನರಿಗೆ ಮುಟ್ಟಿರದೇ ಇದ್ದರೂ, ನಾಳೆಯ ಸಾರಿಗೆ ನೌಕರರ ಪ್ರತಿಭಟನೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಲಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನೌಕರರು ತಮ್ಮನ್ನು ಸರಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಜಾಥಾ ನಡೆಸಲಿದ್ದಾರೆ.
ಡಿ.10ರಂದು ಬೆಳಗ್ಗೆ 10 ಗಂಟೆಗೆ ಸಾರಿಗೆ ನೌಕರರು ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾಲ್ನಡಿಗೆ ಹೊರಡಲಿದ್ದು, ವಿಧಾನಸೌಧದ ವರೆಗೆ ಸಾಗಲಿದ್ದಾರೆ. ಜಾಥಾದಲ್ಲಿ ರಾಜ್ಯದ ಒಂದೂವರೆ ಲಕ್ಷ ಮಂದಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು, ಇಷ್ಟೂ ಜನ ಸಿಬಂದಿ ಬಸ್ ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದರೆ ಮುಷ್ಕರದ ಬಿಸಿ ಇಡೀ ರಾಜ್ಯಕ್ಕೆ ತಟ್ಟುವ ಸಾಧ್ಯತೆಯಿದೆ. ಸಾರಿಗೆ ಸಂಚಾರದಲ್ಲಿ ಭಾರೀ ಪ್ರಮಾಣದ ವ್ಯತ್ಯಯ ಆಗಲಿದೆ.


ಈ ಮಧ್ಯೆ ಹೇಳಿಕೆ ನೀಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ವೇತನವನ್ನು ನವೆಂಬರ್ ತಿಂಗಳ ವರೆಗೂ ಪೂರ್ತಿಯಾಗಿ ನೀಡಲಾಗಿದೆ. ಸದ್ಯಕ್ಕೆ ಕೊರೊನಾ ಸಂಕಷ್ಟ ಇರುವುದರಿಂದ ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ಪ್ರಸ್ತಾಪ ಇಲ್ಲ. ಸದ್ಯಕ್ಕೆ ಹಣಕಾಸು ಸಮಸ್ಯೆ ಇದೆ. ಅಲ್ಲದೆ, ಸಾರಿಗೆ ನೌಕರರ ಈ ಬೇಡಿಕೆ ಪರಿಗಣಿಸಿದರೆ ಇತರೇ ನಿಗಮಗಳ ನೌಕರರು ಅದೇ ಬೇಡಿಕೆ ಮುಂದಿಡುತ್ತಾರೆ. ಇದರಿಂದಾಗಿ ಇದನ್ನು ಸದ್ಯಕ್ಕೆ ಮಾನ್ಯ ಮಾಡುವ ಸ್ಥಿತಿಯಲ್ಲಿ ಸರಕಾರ ಇಲ್ಲ ಎಂದು ಹೇಳಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:02 pm
HK News Staffer
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm