ಬ್ರೇಕಿಂಗ್ ನ್ಯೂಸ್
07-09-24 09:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ 07: ದೇಶದೆಲ್ಲೆಡೆ ಸಂಭ್ರಮದಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತಿದೆ. ಎಲ್ಲೆಡೆ ವಕ್ರತುಂಡನ ಮೂರ್ತಿಯನ್ನು ಪ್ರತಿಷ್ಟಾಪಿಸಿ ಆರಾಧನೆ, ಪೂಜೆ ನಡೆಸಲಾಗುತ್ತಿದೆ. ಈ ನಡುವೆ ಗಣೇಶನ ತರಲು ತೆರಳಿದ್ದ ಯುವಕರಿಬ್ಬರು ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ.
ಟಾಟಾ ಏಸ್ ವಾಹನದಲ್ಲಿ ಗಣಪತಿ ತರಲು ತೆರಳುತ್ತಿದ್ದ ವೇಳೆ ಪಲ್ಟಿ ಆಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ದುರ್ಘಟನೆ ನಡೆದಿದೆ. 9 ಜನ ಯುವಕರಿದ್ದ ವಾಹನ ಅಪಘಾತಕ್ಕೀಡಾಗಿದೆ.
ಶ್ರೀಧರ್ (20) ಹಾಗೂ ಧನುಷ್ (20) ಮೃತ ಯುವಕರಾಗಿದ್ದಾರೆ. ಅಪಘಾತದಲ್ಲಿ ಮತ್ತಿಬ್ಬರು ಯುವಕರ ತಲೆಗೆ ಗಂಭೀರ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆ ರವಾನಿಸಲಾಗಿದೆ. ಅಲ್ಲದೇ ವಾಹನದಲ್ಲಿದ್ದ ಇತರ ಮೂವರು ಯುವಕರಿಗೂ ಹೆಚ್ಚಿನ ಗಾಯಗಳಾಗಿದೆ. ಅವರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳೆಲ್ಲ ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಯುವಕರು ಗಣಪತಿ ಮೂರ್ತಿ ತರಲು ತರೀಕೆರೆಗೆ ಹೊರಟಾಗ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಟಾಟಾ ಏಸ್ ಪಲ್ಟಿ ಆಗಿದೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಣೇಶನ ಹಬ್ಬದ ಸಂಭ್ರಮದಲ್ಲಿರಬೇಕಿದ್ದ ಊರಿನಲ್ಲೀಗ ಸೂತಕದ ಛಾಯೆ ಆವರಿಸಿದೆ.
ವೈದ್ಯರ ಸಲಹೆ ಮೇರೆಗೆ ಯುವಕರ ಪೋಷಕರಾದ ಕುಬೇಂದ್ರ-ಪದ್ಮಾ ಮತ್ತು ರಮೇಶ್-ಶೋಭಾ ಅವರು ತಮ್ಮ ಮಕ್ಕಳ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಇದರಿಂದ ನಾಲ್ವರು ಅಂಧರಿಗೆ ದೃಷ್ಟಿ ದೊರಕಿದಂತಾಗುತ್ತದೆ ಎಂದು ತರೀಕೆರೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ದೇವರಾಜು ತಿಳಿಸಿದ್ದಾರೆ.
Two youths killed in road accident while thier way to bring Ganapathi idol in Chikkamagaluru.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm