ಬ್ರೇಕಿಂಗ್ ನ್ಯೂಸ್
08-09-24 03:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.8: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಭಾವೈಕ್ಯತೆಯ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಸೌಹಾರ್ದತೆಯ ಸಂದೇಶ ಸಾರಿದ್ದಾರೆ.
ಎನ್. ಆರ್.ಪುರ ತಾಲೂಕಿನ ರಾಜೀವ್ ನಗರದಲ್ಲಿ ಪ್ರತಿಷ್ಟಾಪನೆ ಮಾಡಲಾಗಿರುವ ಗಣೇಶ ಮೂರ್ತಿ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಎಲ್ಲರೂ ಒಟ್ಟಾಗಿ ಸೇರಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಭ್ರಮಿಸಿದರು.
ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಈ ಗಣೇಶನಿಗೆ ಭಾವೈಕ್ಯತೆಯ ಗಣಪ ಎಂದೇ ಹೆಸರಿಡಲಾಗಿದೆ. ಅಲ್ಲದೇ ಈ ಗಣಪತಿ ಸಮಿತಿಗೆ ಮುಸ್ಲಿಂ ಮಹಿಳೆಯೇ ಅಧ್ಯಕ್ಷೆ ಆಗಿರುವುದು ವಿಶೇಷ. ಹಿಂದೂ ಮುಸ್ಲಿಮರ ಮಧ್ಯೆ ಅನೇಕ ವಿಚಾರಕ್ಕೆ ಘರ್ಷಣೆಗಳು ನಡೆಯುತ್ತವೆ. ಆದರೆ ಹಿಂದುಗಳ ಗಣೇಶನದ ಹಬ್ಬವನ್ನು ಸೌಹಾರ್ದ ಸಾರುವಂತೆ ಇಲ್ಲಿ ಆಚರಿಸಲಾಗಿದ್ದು ಸಮಾಜಕ್ಕೆ ಮಾದರಿಯಾಗಿದೆ.
ಕಳೆದ 14 ವರ್ಷಗಳಿಂದ ಇದೇ ಗ್ರಾಮದ ಮುಸ್ಲಿಂ ಮಹಿಳೆ ಜುಬೇದಾ ಗಣಪತಿ ಸೇವಾ ಸಮಿತಿ ಅಧ್ಯಕ್ಷರಾಗಿ ಹಿಂದೂ ಸಮುದಾಯದರ ಜೊತೆ ಸೇರಿ ಗಣೇಶೋತ್ಸವ ನಡೆಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಗಣೇಶನ ಮೂರ್ತಿಯನ್ನು ತಂದು ಭಾನುವಾರ ಬೆಳಗ್ಗೆ ಪ್ರತಿಷ್ಠಾಪಿಸಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮಕ್ಕಳನ್ನು ಒಂದು ಕಡೆ ಸೇರಿಸಿ ಯಾವುದೇ ತಾರತಮ್ಯವಿಲ್ಲದೇ ಎಲ್ಲರೂ ಒಟ್ಟಾಗಿ ಪೂಜೆ ಸಲ್ಲಿಸಲಾಗಿದೆ. ಮಕ್ಕಳಿಗೂ ಸಹ ಭಾವೈಕ್ಯತೆ ಸಂದೇಶವನ್ನು ಸಾರಲಾಗಿದೆ.
14 ವರ್ಷಗಳಿಂದ ನಾವು ರಾಜೀವ್ ನಗರದಲ್ಲಿ ಗಣಪತಿ ಸೇವಾ ಸಮಿತಿ ಮೂಲಕ ಗಣಪತಿ ಪ್ರತಿಷ್ಠಾಪನೆ ಮಾಡಿ ಪೂಜಿಸುತ್ತಿದ್ದೇವೆ. ಯಾವ ಧರ್ಮದ ಭೇದವಿಲ್ಲದೇ ಎಲ್ಲರೂ ಗಣೇಶನನ್ನು ಪೂಜಿಸುತ್ತಾರೆ. ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಪ್ರತಿವರ್ಷ ಹಬ್ಬ ಆಚರಣೆ ಮಾಡುತ್ತೇವೆ ಎಂದು ಜುಬೇದಾ ಹೇಳಿದ್ದಾರೆ.
Chikmagalur Ganesha festival celebrated in harmony by all three religions, muslims women leads as president.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm