ಬ್ರೇಕಿಂಗ್ ನ್ಯೂಸ್
08-09-24 03:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.8: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಭಾವೈಕ್ಯತೆಯ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಸೌಹಾರ್ದತೆಯ ಸಂದೇಶ ಸಾರಿದ್ದಾರೆ.
ಎನ್. ಆರ್.ಪುರ ತಾಲೂಕಿನ ರಾಜೀವ್ ನಗರದಲ್ಲಿ ಪ್ರತಿಷ್ಟಾಪನೆ ಮಾಡಲಾಗಿರುವ ಗಣೇಶ ಮೂರ್ತಿ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಎಲ್ಲರೂ ಒಟ್ಟಾಗಿ ಸೇರಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಭ್ರಮಿಸಿದರು.
ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಈ ಗಣೇಶನಿಗೆ ಭಾವೈಕ್ಯತೆಯ ಗಣಪ ಎಂದೇ ಹೆಸರಿಡಲಾಗಿದೆ. ಅಲ್ಲದೇ ಈ ಗಣಪತಿ ಸಮಿತಿಗೆ ಮುಸ್ಲಿಂ ಮಹಿಳೆಯೇ ಅಧ್ಯಕ್ಷೆ ಆಗಿರುವುದು ವಿಶೇಷ. ಹಿಂದೂ ಮುಸ್ಲಿಮರ ಮಧ್ಯೆ ಅನೇಕ ವಿಚಾರಕ್ಕೆ ಘರ್ಷಣೆಗಳು ನಡೆಯುತ್ತವೆ. ಆದರೆ ಹಿಂದುಗಳ ಗಣೇಶನದ ಹಬ್ಬವನ್ನು ಸೌಹಾರ್ದ ಸಾರುವಂತೆ ಇಲ್ಲಿ ಆಚರಿಸಲಾಗಿದ್ದು ಸಮಾಜಕ್ಕೆ ಮಾದರಿಯಾಗಿದೆ.
ಕಳೆದ 14 ವರ್ಷಗಳಿಂದ ಇದೇ ಗ್ರಾಮದ ಮುಸ್ಲಿಂ ಮಹಿಳೆ ಜುಬೇದಾ ಗಣಪತಿ ಸೇವಾ ಸಮಿತಿ ಅಧ್ಯಕ್ಷರಾಗಿ ಹಿಂದೂ ಸಮುದಾಯದರ ಜೊತೆ ಸೇರಿ ಗಣೇಶೋತ್ಸವ ನಡೆಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಗಣೇಶನ ಮೂರ್ತಿಯನ್ನು ತಂದು ಭಾನುವಾರ ಬೆಳಗ್ಗೆ ಪ್ರತಿಷ್ಠಾಪಿಸಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮಕ್ಕಳನ್ನು ಒಂದು ಕಡೆ ಸೇರಿಸಿ ಯಾವುದೇ ತಾರತಮ್ಯವಿಲ್ಲದೇ ಎಲ್ಲರೂ ಒಟ್ಟಾಗಿ ಪೂಜೆ ಸಲ್ಲಿಸಲಾಗಿದೆ. ಮಕ್ಕಳಿಗೂ ಸಹ ಭಾವೈಕ್ಯತೆ ಸಂದೇಶವನ್ನು ಸಾರಲಾಗಿದೆ.
14 ವರ್ಷಗಳಿಂದ ನಾವು ರಾಜೀವ್ ನಗರದಲ್ಲಿ ಗಣಪತಿ ಸೇವಾ ಸಮಿತಿ ಮೂಲಕ ಗಣಪತಿ ಪ್ರತಿಷ್ಠಾಪನೆ ಮಾಡಿ ಪೂಜಿಸುತ್ತಿದ್ದೇವೆ. ಯಾವ ಧರ್ಮದ ಭೇದವಿಲ್ಲದೇ ಎಲ್ಲರೂ ಗಣೇಶನನ್ನು ಪೂಜಿಸುತ್ತಾರೆ. ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಪ್ರತಿವರ್ಷ ಹಬ್ಬ ಆಚರಣೆ ಮಾಡುತ್ತೇವೆ ಎಂದು ಜುಬೇದಾ ಹೇಳಿದ್ದಾರೆ.
Chikmagalur Ganesha festival celebrated in harmony by all three religions, muslims women leads as president.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm