ಬ್ರೇಕಿಂಗ್ ನ್ಯೂಸ್
08-09-24 03:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.8: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಭಾವೈಕ್ಯತೆಯ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಸೌಹಾರ್ದತೆಯ ಸಂದೇಶ ಸಾರಿದ್ದಾರೆ.
ಎನ್. ಆರ್.ಪುರ ತಾಲೂಕಿನ ರಾಜೀವ್ ನಗರದಲ್ಲಿ ಪ್ರತಿಷ್ಟಾಪನೆ ಮಾಡಲಾಗಿರುವ ಗಣೇಶ ಮೂರ್ತಿ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಎಲ್ಲರೂ ಒಟ್ಟಾಗಿ ಸೇರಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಭ್ರಮಿಸಿದರು.
ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಈ ಗಣೇಶನಿಗೆ ಭಾವೈಕ್ಯತೆಯ ಗಣಪ ಎಂದೇ ಹೆಸರಿಡಲಾಗಿದೆ. ಅಲ್ಲದೇ ಈ ಗಣಪತಿ ಸಮಿತಿಗೆ ಮುಸ್ಲಿಂ ಮಹಿಳೆಯೇ ಅಧ್ಯಕ್ಷೆ ಆಗಿರುವುದು ವಿಶೇಷ. ಹಿಂದೂ ಮುಸ್ಲಿಮರ ಮಧ್ಯೆ ಅನೇಕ ವಿಚಾರಕ್ಕೆ ಘರ್ಷಣೆಗಳು ನಡೆಯುತ್ತವೆ. ಆದರೆ ಹಿಂದುಗಳ ಗಣೇಶನದ ಹಬ್ಬವನ್ನು ಸೌಹಾರ್ದ ಸಾರುವಂತೆ ಇಲ್ಲಿ ಆಚರಿಸಲಾಗಿದ್ದು ಸಮಾಜಕ್ಕೆ ಮಾದರಿಯಾಗಿದೆ.
ಕಳೆದ 14 ವರ್ಷಗಳಿಂದ ಇದೇ ಗ್ರಾಮದ ಮುಸ್ಲಿಂ ಮಹಿಳೆ ಜುಬೇದಾ ಗಣಪತಿ ಸೇವಾ ಸಮಿತಿ ಅಧ್ಯಕ್ಷರಾಗಿ ಹಿಂದೂ ಸಮುದಾಯದರ ಜೊತೆ ಸೇರಿ ಗಣೇಶೋತ್ಸವ ನಡೆಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಗಣೇಶನ ಮೂರ್ತಿಯನ್ನು ತಂದು ಭಾನುವಾರ ಬೆಳಗ್ಗೆ ಪ್ರತಿಷ್ಠಾಪಿಸಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮಕ್ಕಳನ್ನು ಒಂದು ಕಡೆ ಸೇರಿಸಿ ಯಾವುದೇ ತಾರತಮ್ಯವಿಲ್ಲದೇ ಎಲ್ಲರೂ ಒಟ್ಟಾಗಿ ಪೂಜೆ ಸಲ್ಲಿಸಲಾಗಿದೆ. ಮಕ್ಕಳಿಗೂ ಸಹ ಭಾವೈಕ್ಯತೆ ಸಂದೇಶವನ್ನು ಸಾರಲಾಗಿದೆ.
14 ವರ್ಷಗಳಿಂದ ನಾವು ರಾಜೀವ್ ನಗರದಲ್ಲಿ ಗಣಪತಿ ಸೇವಾ ಸಮಿತಿ ಮೂಲಕ ಗಣಪತಿ ಪ್ರತಿಷ್ಠಾಪನೆ ಮಾಡಿ ಪೂಜಿಸುತ್ತಿದ್ದೇವೆ. ಯಾವ ಧರ್ಮದ ಭೇದವಿಲ್ಲದೇ ಎಲ್ಲರೂ ಗಣೇಶನನ್ನು ಪೂಜಿಸುತ್ತಾರೆ. ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಪ್ರತಿವರ್ಷ ಹಬ್ಬ ಆಚರಣೆ ಮಾಡುತ್ತೇವೆ ಎಂದು ಜುಬೇದಾ ಹೇಳಿದ್ದಾರೆ.
Chikmagalur Ganesha festival celebrated in harmony by all three religions, muslims women leads as president.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm