ಬ್ರೇಕಿಂಗ್ ನ್ಯೂಸ್
09-09-24 04:49 pm HK News Desk ಕರ್ನಾಟಕ
ತುಮಕೂರು, ಸೆ.9: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಕೆಲವು ನಾಯಕರ ಹಿಂಬಾಲಕರು ತಮ್ಮವರೇ ಮುಂದಿನ ಸಿಎಂ ಎಂದು ಪೋಸ್ಟರ್ ಹಾಕುತ್ತಿದ್ದಾರೆ. ಪರಮೇಶ್ವರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ತುಮಕೂರು ಭಾಗದಲ್ಲಿ ಅವರ ಬೆಂಬಲಿಗರು ಪೋಸ್ಟರ್ ಹಾಕಲು ಆರಂಭಿಸಿದ್ದಾರೆ.
ಸಿದ್ದರಾಮಯ್ಯ ಅವರ ಮೂಡಾ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪು ಹೊರಬರುವ ಮೊದಲೇ ಸಿಎಂ ಪೋಸ್ಟರ್ ಶುರುವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಈಗ ಕಾಂಗ್ರೆಸಿನ ನೂತನ ಸಿಎಂ ಪರಮೇಶ್ವರ್ ಎಂದು ಪೋಸ್ಟರ್ ಹಾಕಿದ್ದು ಭಾರೀ ವೈರಲ್ ಆಗಿದೆ.
ಮುಂದಿನ ಸಿಎಂ ಪರಮೇಶ್ವರ್ ಆಗೋದು ಖಚಿತ ಎಂದು ಗೃಹ ಸಚಿವರ ತವರು ನೆಲ ಕೊರಟಗೆರೆ ತಾಲೂಕಿನ ಗ್ರಾಮಾಂತರ ಭಾಗದ ಅಧ್ಯಕ್ಷ ಸೋಮಶೇಖರ್ ಎಂಬವರು ಪೋಸ್ಟ್ ಹಾಕಿದ್ದಾರೆ. ಸಿದ್ದರಾಮಯ್ಯ ಕುರಿತ ಮೂಡಾ ಪ್ರಕರಣ ತೀರ್ಪು ಹೊರಬೀಳುವ ದಿನವೇ ಈ ಪೋಸ್ಟ್ ಹಾಕಿದ್ದು ರಾಜಕೀಯದಲ್ಲಿ ಗುಸು ಗುಸು ಶುರುವಾಗಿದೆ. ಕೋಟ್೯ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ರೆ ಸಿದ್ದರಾಮಯ್ಯ ಕೆಳಗಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಕೋರ್ಟ್ ಅನುಮತಿ ನೀಡಿದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಚರ್ಚೆಯಾಗುತ್ತಿದ್ದು ಇದೇ ಕಾರಣಕ್ಕೆ ಪರಂ ಬೆಂಬಲಿಗರು ಪೋಸ್ಟ್ ಹಾಕಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಬೆಂಬಲಿಗರು ಹೈಕೋರ್ಟ್ ಕದ ತಟ್ಟಿದ್ದಾರೆ. ಎರಡು ಬಾರಿ ವಿಚಾರಣೆ ಮುಂದೂಡಿಕೆಯಾಗಿ ಸೆ.9ಕ್ಕೆ ಬಂದಿತ್ತು. ಇಂದು ಸಂಜೆಯ ವೇಳೆಗೆ ತೀರ್ಪು ಹೊರಬೀಳಲಿದೆ ಎನ್ನಲಾಗುತ್ತಿದೆ. ಮುಂದಿನ ಸಿಎಂ ವಿಚಾರದಲ್ಲಿ ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ, ಪರಮೇಶ್ವರ್ ಹೇಳಿಕೆ ನೀಡುತ್ತಿದ್ದು ಪರಸ್ಪರ ವೈರುಧ್ಯದ ಹೇಳಿಕೆ ನೀಡಿರುವುದರಿಂದ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Parameshwara to be the next cm of Karnataka poster goes viral. Supporters of Parameshwara poster goes viral Mangalore.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm