ಬ್ರೇಕಿಂಗ್ ನ್ಯೂಸ್
09-09-24 04:49 pm HK News Desk ಕರ್ನಾಟಕ
ತುಮಕೂರು, ಸೆ.9: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿದೆ. ಕೆಲವು ನಾಯಕರ ಹಿಂಬಾಲಕರು ತಮ್ಮವರೇ ಮುಂದಿನ ಸಿಎಂ ಎಂದು ಪೋಸ್ಟರ್ ಹಾಕುತ್ತಿದ್ದಾರೆ. ಪರಮೇಶ್ವರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ತುಮಕೂರು ಭಾಗದಲ್ಲಿ ಅವರ ಬೆಂಬಲಿಗರು ಪೋಸ್ಟರ್ ಹಾಕಲು ಆರಂಭಿಸಿದ್ದಾರೆ.
ಸಿದ್ದರಾಮಯ್ಯ ಅವರ ಮೂಡಾ ಪ್ರಕರಣದ ಬಗ್ಗೆ ಹೈಕೋರ್ಟ್ ತೀರ್ಪು ಹೊರಬರುವ ಮೊದಲೇ ಸಿಎಂ ಪೋಸ್ಟರ್ ಶುರುವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಬಲಿಗರು ಈಗ ಕಾಂಗ್ರೆಸಿನ ನೂತನ ಸಿಎಂ ಪರಮೇಶ್ವರ್ ಎಂದು ಪೋಸ್ಟರ್ ಹಾಕಿದ್ದು ಭಾರೀ ವೈರಲ್ ಆಗಿದೆ.
ಮುಂದಿನ ಸಿಎಂ ಪರಮೇಶ್ವರ್ ಆಗೋದು ಖಚಿತ ಎಂದು ಗೃಹ ಸಚಿವರ ತವರು ನೆಲ ಕೊರಟಗೆರೆ ತಾಲೂಕಿನ ಗ್ರಾಮಾಂತರ ಭಾಗದ ಅಧ್ಯಕ್ಷ ಸೋಮಶೇಖರ್ ಎಂಬವರು ಪೋಸ್ಟ್ ಹಾಕಿದ್ದಾರೆ. ಸಿದ್ದರಾಮಯ್ಯ ಕುರಿತ ಮೂಡಾ ಪ್ರಕರಣ ತೀರ್ಪು ಹೊರಬೀಳುವ ದಿನವೇ ಈ ಪೋಸ್ಟ್ ಹಾಕಿದ್ದು ರಾಜಕೀಯದಲ್ಲಿ ಗುಸು ಗುಸು ಶುರುವಾಗಿದೆ. ಕೋಟ್೯ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ರೆ ಸಿದ್ದರಾಮಯ್ಯ ಕೆಳಗಿಳಿಯೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಕೋರ್ಟ್ ಅನುಮತಿ ನೀಡಿದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಚರ್ಚೆಯಾಗುತ್ತಿದ್ದು ಇದೇ ಕಾರಣಕ್ಕೆ ಪರಂ ಬೆಂಬಲಿಗರು ಪೋಸ್ಟ್ ಹಾಕಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಬೆಂಬಲಿಗರು ಹೈಕೋರ್ಟ್ ಕದ ತಟ್ಟಿದ್ದಾರೆ. ಎರಡು ಬಾರಿ ವಿಚಾರಣೆ ಮುಂದೂಡಿಕೆಯಾಗಿ ಸೆ.9ಕ್ಕೆ ಬಂದಿತ್ತು. ಇಂದು ಸಂಜೆಯ ವೇಳೆಗೆ ತೀರ್ಪು ಹೊರಬೀಳಲಿದೆ ಎನ್ನಲಾಗುತ್ತಿದೆ. ಮುಂದಿನ ಸಿಎಂ ವಿಚಾರದಲ್ಲಿ ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ, ಪರಮೇಶ್ವರ್ ಹೇಳಿಕೆ ನೀಡುತ್ತಿದ್ದು ಪರಸ್ಪರ ವೈರುಧ್ಯದ ಹೇಳಿಕೆ ನೀಡಿರುವುದರಿಂದ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
Parameshwara to be the next cm of Karnataka poster goes viral. Supporters of Parameshwara poster goes viral Mangalore.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm